೩,೫೦೦,೦೦೦

(೧೯೪೩ನೆಯ ಇಸವಿಯ ಕೊನೆಯ ೪ ತಿಂಗಳಲ್ಲಿ ಬಂಗಾಲದಲ್ಲಿ ಕ್ಷಾಮಕ್ಕೂ ರೋಗಕ್ಕೂ ತುತ್ತಾದವರನ್ನು ಕುರಿತು)

ಸತ್ತರೇ ಅಕಟ ಮೂವತ್ತಯಿದು ಲಕ್ಷ
ಬಂಗಾಲದೊಳಗೆಮ್ಮ ಕಂಗಾಲ ಬಳಗಂ!
ಬೋನದಾ ದುರ್‍ಭಿಕ್ಷ, ಬೇನೆಯ ಸುಭಿಕ್ಷ –
ಕರು ಉಂಡಿತೇ ಹಾಲು ತುರು ಹಿಂಡೆ ಕೊಳಗಂ?

ಇಳೆ ಭಾರವನ್ನಿಂತೆ ಇಳುಹುದೆನೆ ತನ್ನ,
ಹೌರಕ್ಕೆ ಹೌರ ಗಡ ಭಾರತರೊ ಭಾರ?
ವಡಬಾಗ್ನಿಯಿಂ ತನ್ನ ಕಡಲಿಗೆನೆ ಬನ್ನ,
ಯೂರೋವದೌರ್‍ವದಿಂ ಭಾರತಕೊ ಘೋರ?

ಯಾರ ಸೊಕ್ಕಿಗೆ, ದೇವ, ಯಾರ ತಲೆ ದಂಡ?
ಸಾಲದೆನೆ ನಮ್ಮ ಏಗಾಲದೀ ಅಡಿಮೆ
ಮತ್ತೆ ಲೋಕದ ಪಾಪ ಹೊತ್ತ ಕುರಿವಿಂಡ
ಬೇನೆ ಬರ ಮುಕ್ಕೆ ಇನ್ನೇನೆಮಗೆ ಕಡಿಮೆ?

ಇನಿಸೆ ಭಾಗ್ಯಕೆ, ಜೀಯ, ಜನಿಸಿದೆವೆ ನಾವು?-
ಕೂಳಿದ್ದು ಉಪವಾಸ, ಬಾಳಿದ್ದು ಸಾವು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಿರಿಗನ್ನಡ ವೈಭವ
Next post ಭಾರತದ ಸಂತನ ಕತೆ

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…