Home / ಕವನ / ಕವಿತೆ / ಯಾರೆಂಬರು ಮುಗಿದುವೆಂದು ಬವರಾಂ?

ಯಾರೆಂಬರು ಮುಗಿದುವೆಂದು ಬವರಾಂ?

ಹತೋ ವಾ ಪ್ತವ್ಸ್ಯಸಿ ಸ್ವರ್‍ಗಂ ಜಿ ತ್ವಾವಾ ಭೋಕ್ಷ್ಯಸೇ ಮಹೀಮ್ |
ತಸ್ಮಾದುತಿಷ್ಟ ಕೌಂತೇಯ ಯುದ್ಧಾಯ ಕೃತನಿಶ್ಚಯ ತಿ (ಗೀತಾ ೨.೩೭)

ಯಾರಂಬರು ಮುಗಿದುವೆಂದು ಬವರಂ?
ನಂಬದಿರದು ಮರುಳರ ಮಾತೆ:
ನರನೆನ್ನವರಂ ನರನನ್ನೆವರಂ
ರಣಾಂಗಣವೆ ಶಾಂತಿಯ ಮಾತೆ!
ಶಾಂತಿಯೆ ನಿನ್ನಯ ಸಾಧನಮಾಗೆ
ಸದಾ ಸಿದ್ಧವಿರು ಯುದ್ಧಕ ಸಾಗೆ.

ಯುದ್ಧವಿಲ್ಲದಭಿವೃದ್ಧಿಯದುಂಟೆ?
ಯುದ್ಧದೆ ಮನುಜತೆಯ ವಿಕಾಸಂ-
ಬೆಂಕಿಯೊಳಲ್ಲವೆ ಕಬ್ಬಿಣ ದಾಂಟೆ
ಯತ್ರ ತಂತ್ರ ಶಕ್ತಿಯ ಸಾನಂ?
ಯೋಧನಾದ ನರನಮರಸಮಾನಂ,
ಯೋಧನೆಂದೆ ಸೃಷ್ಟಿಯ ಯಜಮಾನಂ.

ಕಟ್ಟಳೆಯೊಳೆ ಹಳಸಿದ ಬಾಳುವೆಗೆ
ಯುದ್ಧದಿ ನವಯೌವನ ಸಿದ್ಧಿ;
ಪರವಶತಗೆ ನಾಚದ ತಾಳುವೆಗೆ
ಯುದ್ಧದೊಳಾ ಪಾಪದ ಶುದ್ದಿ;
ಯುದ್ಧವೆ ಮೃತಜೀವನದುತ್ಥಾನಂ,
ಯುದ್ಧವೆ ಉತ್ಕ್ರಾಂತಿಯ ಸೋಪಾನಂ.

ನರತೆಯೊಂದ ನರನಾದಡನೇಕಂ,
ಏಕಾರ್‍ಥದ ಮಂದಿಯೆ ಜನತ;
ಜನತ ಜನತೆಯೊಳಗಿರದು ಏವೇಕಂ-
ಸ್ವಾರ್ಥಕಲ್ಲವಲ್ಲವೆ ತನತೆ?
ಸ್ವಾರ್ಥತೆ ಪರ್‍ಆರ್‍ಥದಲಿ ಕೆಯ್ಮಾಡ
ಸಂಗರವಾ ಪ್ರಸಭವನೀಡಾಡೆ

ಸರ್‍ವಜೀವಿಗಳೊಳೊರ್‍ವನೆ ಮನುಜಂ
ವರಹಿತ ಗೆಯಲೆಂದೊಗೆತಂದು,
ತನ್ನ ಹಂಗನವಮನ್ನಸಿ ದನುಜಂ
ತಾನೆನೆ ಪರರಲಿ ಮಲೆವಂದು,
ಕೇಸುರಿ ಬಲೆಯ ಕೇಸರಿಗೆಂತು
ಸಮರವಾತನಂ ಕಮರಿಸಲಂತು

ಸಾಲದು ನರಜನ್ಮವ ಬರಿದೆತ್ತ-
ಜನ್ಮಮಾತ್ರವೇತರ ಕಾರ್‍ಯಂ?
ನರನಹೆಯಾ? ದುಡಿ ನರತೆಯ ಮತ್ತ-
ದ್ವಿಜನಾಗದ ಮನುಜನನಾರ್‍ಯಂ!
ಪರರಳಲಿನ ವರಿಹರಿಕಗೆ ನಂದು
ಹೊಸ ಬಾಳೆತ್ತಿದವನೆ ದ್ವಿಜನಿಂದು.

ಅನ್ಯನಲ್ಲ, ನೀನೆ ನನ್ನ ಯೋಧಂ!
ಕಾದೆನಲಾ ಪ್ರಕೃತಿಯೆ ನಿನಗೆ.
ಕಟ್ಟಾಜ್ಞೆಯದಕ ತಟ್ಟಿ ವಿರೋಧಂ
ಎಲ್ಲಿನೆಲ್ಲಿಗುರುಳಿದೆ ಕೊನೆಗೆ!
ಕತ್ತಿಗೆ ಬಾರದ ಕಬ್ಬಿಣ ಬಾಗಿ
ಸುಟ್ಟಪುದನುದಿನ ಸಟ್ಟುಗಮಾಗಿ
ಅಳಿವೆಯೊ? ಉಳಿವೆಯೊ? ಪ್ರಶ್ನೆಯನಿತ್ತೆ-
ಮೂರನೆಯದಿಲ್ಲ ನಿನಗಾಯ.
ಕಾದದಡೆ ಸಾವಿಗವುತಣವಿತ್ತೆ
ಕಾದೆ ಸದೆದೆ ಸಾವನೆ ಸಾಯ!
ಪ್ರಬಲರಬಲರಂ ಕಬಲಿಸೆ, ಹಗೆಯಾ
ಕಾದೊ ಕಾದದೆಯೊ ಬದುಕುವೆ, ಬಗೆಯಾ!

ಕದೆ ಸಾವೆನೆಂದಕಟಾ ಗಾಸಿಯೊ?
ಕಾದದವರಿಗಿಲ್ಲವ ಸಾಯೆ?
ಕತ್ತಿಯಾಗಿ ಹಾಯೆ ಸಾಯೆ ವಾಸಿಯಾ?
ನಾಲದಂತ ಕಾಲಲಿ ತೇಯೆ?
ಸಾವಿಗಂಜೆ ಸಾವಿರ ಸಲ ಸತ್ತ,
ಸಾವನಂಜದವನೂಮ್ಮೆಯನಿತ್ತ.

ಕಾದೆ ಸಾವನೆಂದಲ್ಲಿಗೆ ಸರಿಯ,
ಬಾಳ್ವೆ ಸಾವಿನೊಳೆ ನೆರವೇರೆ?
ಬಾಳ್ವೆ ಬಾಳತಕ್ಕುದೊ ನಾನರಿಯೆ,
ಸಾವು ಸಾಯತಕ್ಕುದು ನೇರೆ!
ಧರ್‍ಮಯುದ್ಧವೊಂದಲ್ಲದೆ ಬೇರ
ದಾರಿಯೆ ವೀರಸ್ವರ್‍ಗವನೇರೆ?

ಸೆರೆಗೇಕಂಜುವೆ? ನೆರೆಯಾಳಲ್ಲವ
ತನ್ನ ಮನೆಯೊಳನ್ಯರ ತೊತ್ತು?
ಸಿಕ್ಕ ಮಡೆಯ ಮುಕ್ಕುವ ಗಿಳಿ ಬಲ್ಲವೆ
ಗೂಡೊ ಬೀಡೊ ಎನುವಾ ಗೊತ್ತು?
ಬಸುರಲಿ ಸೋಸಿಲ್ಲವೆ ನೀ ಸೆರೆಯಾ?
ಹೊಸ ಹುಟ್ಟಿನ ಬಸಿರಾ ಸೆರೆಯರಿಯಾ!

ತನ್ನ ಕಡುಕನ್ನೆಲ್ಲ ಮುನ್ನ ಕಾದು,
ತಾಯಿಳೆಯ ಬಿಡುಗಡೆಗೆ ಕಾದು,
ನರತೆಯ ಸರಿಸೋದರತೆಗೆ ಕಾದು,
ಮನುಜನ ವಿಮೋಚನೆಗೆ ಕಾದು.
ಪೂಸತೆ ಭವಿಷ್ಯವ ನೊಸಯಿಸೆ ಕಾದು,
ಬದುಕಿದೊಂದು ಕೂಳುಗುಳವೆನೆ ಕಾದು.

ನೀನಜರಾಮರನಹೆಯಾ? ಕಾದು-
ನರರಿಗೆ ವೆರೆತಮರತಯೊಳವೆ?
ಕಂಚೊ ಕಲ್ಲೊ ಕತೆ ಕವಿತೆಯೊ ಕಾದು
ನಿನ್ನನುಳಿಸೆ ನಿನಗಿನ್ನಳಿವೆ?
ಗೆದ್ದರೆ ಹೊಸ ಹೊತ್ತೆದ್ದುದು ಮುಂದೆ.
ಬಿದ್ದರೆ ನೇಸರಿನುದ್ದಕೆ ನಿಂದೆ!

ನಿನಗೆ ಕಾದೆನುವೆನಿದೊ ಧರ್‍ಮರಣಂ,
ಪರಾಕ್ರಮಣವದು ರಣವಲ್ಲ,
ವರರ ಬಿಡುವಿನವಹರಣವೆ ಮರಣಂ-
ಬಿಡುವ ತುಡುಕಿ ಕೆಡದವರಿಲ್ಲ.
ಬಿಡುಗಡೆ ಎನೆ ಜನಜನತೆಯ ಸೊತ್ತು,
ಕಳೆವನು ಸೆಳೆವನು ನಿಯತಿಯ ತುತ್ತು.

ಸಗ್ಗದಿಂದ ಸೋನೆಯಂತ ಸುರಿಯದು,
ಬಿಡುಗಡೆ ಗಡ ಬಾರದು ಬರಿದೆ!
ಕಾಯ್ವೊಡೆಯಗೆ ಬರಿ ಬಾಯಿಗೆ ದೊರೆಯದು-
ಕಾದದ ಕೆಯ್ಗೆಂದಿಗುಮರಿದೆ!
ದುಡಿಯದೆ ಪಡೆದಾ ಬಿಡುಗಡೆಯಲ್ಲ-
ರಣಹೇಡಿಗೆ ದೇವರ ನೆರವಿಲ್ಲ.

ಆಯುಧವಿಲ್ಲೆಂದೆದೆಗೆಡಬೇಡ-
ಯೋಧನೆತ್ತಲತ್ತಲೆ ಕತ್ತಿ!
ಸಾಧಕನೆ ತನ್ನ ಸಾಧನ, ನೋಡ!
ಹೇಡಿ ಏವನಾಯುದ್ಧದತ್ತಿ?
ಮನದೊರೆಯಲಿ ನಿನಗನುತಹ ಸಿರಿಯ
ಹೊತ್ತು ಕಾವ ಬಗೆಗತ್ತಿಯ ಹಿರಿಯ!

ನೆರವಿಗೆ ಯಾರೆಂದೇತಕ ಖನ್ನ
ಕಾದಿಸುವೊಡೆಯನೆ ಜತೆಗಿಲ್ಲಾ?
ಎಂದಿನಿಂದ ಕಾದವನಿದೊ! ನಿನ್ನ
ನುಳಿದು ತಾನೆ ಕಾದುವನಲ್ಲ.
ಕಂಡಿಸೆದೆಯನಿಡು ಗಂಡಡಿ ಮುಂದೆ
ನೂಕು ರವೀಂದು ಪತಾಕೆಯ ಹಿಂದೆ

ಕೇಳದೆ ಜಗದಿ ಗೋಳಿನ ಕಾಳ?
ಕಳಕಳಿಸದೆ ನಿನ್ನೆದೆಯಾರ?
ನಾಳೆ ಎಂಬ ಜಡಗೆಂದಿಗು ನಾಳ.
ಬಂದೆನೆಂಬ ಕುದುರೆಗೆ ಹಾರ!
ನೆಟ್ಟನೆ ರಣರಂಗದಿ ಮುಂಬರಿಯೊ,
ಜಯ ಶಾಂತಿ ಎಂದಶಾಂತಿಯನಿರಿಯಾ!
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...