Home / ಕವನ / ತತ್ವಪದ / ಮನವೆ ಎಚ್ಚರ

ಮನವೆ ಎಚ್ಚರ

ಮನವೆ ನಿನಗೆಷ್ಟು ನಾ ಕೋರಿಕೊಳ್ಳಲಿ
ಆದರೂ ನಿನ್ನ ಅವಗುಣ ಬಿಡಲಾರೆ
ಪರಮಾತ್ಮನತ್ತ ನಿನ್ನ ಧ್ಯಾನಿಸದಾಗಲೆಲ್ಲ
ಧ್ಯಾನದಲ್ಲೂ ನೀನು ಚಿತ್ತ ಇಡಲಾರೆ

ನನಗಿರುವವನು ನೀನೊಬ್ಬನೆ ಅಲ್ಲವೆ!
ನೀನೇ ನನ್ನನ್ನು ಮೋಸಗೊಳಿಸಿದರೆ
ಯಾರ ಮುಂದೆ ನಾ ಹೇಳಿಕೊಳ್ಳಬಲ್ಲೇ
ಒಳಗೊಳಗೆ ಆತ್ಮದಲಿ ಕೊರಗದಿರಲಾರೆ

ಆಸೆ ಆಕಾಂಕ್ಷೆ ಸ್ವಾರ್‍ಥಗಳದು
ದೊಡ್ಡ ಅಭಿಪ್ಸೆ ಹೊರೆ ನಿನ್ನದು
ಮತ್ತೆ ಕಾಮ ಮೋಹ ಸಾಧಿಸಲು
ಇಂದ್ರಿಯಗಳ ಸೈನ್ಯವು ನಿನ್ನದು

ಒಳಗೆ ಹೃದಯದತ್ತ ಇಣಕದೆ ನೀನು
ಹೃದಯವನ್ನೆ ಕದ್ದು ಮೋಸಿಸಿರುವೆ
ತನುವಿಗೆ ಬಲಿಪಶು ಮಾಡಿ ನೀನು
ಭೋಗ ಲಾಲಸೆಗಳ ತೀರಿಸಿಕೊಳ್ಳುತ್ತಿರುವೆ

ನೀನು ಮಾಡಿದ ಕರ್‍ಮಗಳಿಗೆಲ್ಲವು
ಮತ್ತೆ ನಾನು ಹೊಣೆಗಾರನಾಗಬೇಕೆನೊ!
ಅಸತ್ಯ ಅನಿತ್ಯಗಳಲಿ ತೊಳಲಾಡುತ್ತ
ಜನುಮ ಜನುಮಗಳಲ್ಲಿ ಅನುಭವಿಸಬೇಕೆನೊ!

ಹೌದು ಮನವೆ ನಾನೀಗ ಎಚ್ಚರಾಗಿರುವೆ
ನಿನ್ನ ಬಣ್ಣದ ಕನಸುಗಳ ನಂಬಲಾರೆ
ನಾನು ಹೇಳಿದ ಹಾಗೆ ನಿ ನಡೆಯದಿದೆ
ಮಾಣಿಕ್ಯ ವಿಠಲನದಾರಿ ಬಿಡಲಾರೆ
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ