Home / ಕವನ / ಕವಿತೆ / ಕರ್‍ಣಾಟಕ ಸೀಮೆಯಾಗೆ…

ಕರ್‍ಣಾಟಕ ಸೀಮೆಯಾಗೆ…

ಮುಂಗೋಳಿ ಕೂಗಿತ್ತು ಕನ್ನಡದ ಪದ ಹಾಡಿ
ರಥವೇರಿ ಬರುತ್ತಿದ್ದ ನೇಸರಗೆ
ಬೆಳ್ಳಕ್ಕಿ ಹಿಂಡಾಗ ಬರೆದಿತ್ತು ಸ್ವಾಗತವ
ಹಾರಾಡಿ ನೀಲಿ ಆಗಸದಾಗೆ
ಮೊಗ್ಗಾದ ಹೂವುಗಳು ಅರಳ್ಯಾವೊ ದಳ ತೆರೆದು
ಚೆಲ್ಲುತ್ತ ಕನ್ನಡದ ಕಸ್ತೂರಿಯ
ಉಣಿಸುತ್ತ ಕಂಪನ್ನು ಬಗೆಬಗೆಯ ಜೀವಕ್ಕೆ
ಸಾರೈತೊ ಈ ಮಣ್ಣಿನ ಮಹಿಮೆಯ
ಗಿರಿ ನವಿಲು ಕುಣಿದಿತ್ತು ಹಸಿರಾದ ಗರಿಬಿಚ್ಚಿ
ಕಾವೇರಿ ಹೊಳೆಯ ಅಂಚಿನಾಗ
ಕಂಡ ಕಣ್ ಸೆಳೆದಿತ್ತು; ಸೆರೆ ಹಿಡಿದು ಬಿಡದಿತ್ತು
ಕರ್ಣಾಟ ಸೀಮೆಯ ಗತ್ತಿನಾಗ
ಅಂಬಾ ಎನ್ನುರ ಗೋವು ಕಚ್ಚೆ ರುಮಾಲ ರೈತ
ಹೊಂಟಾರು ಚಿನ್ನದ ಮಣ್ಣ ಮ್ಯಾಗ
ಬೆವರ್‍ಹನಿ ಇಳಿಸುತ್ತ ಕೈಲಾಸ ತೋರ್‍ಯಾರೊ
ಸ್ವರ್ಗಾವೆ ಇಳಿದಂತ ಭೂಮ್ಯಾಗ
ಕಪ್ಪಾದ ತೆರೆ ಸರಿಸಿ ಬಂದ ಬೆಳಕಿನ ರಾಯ
ಕರುನಾಡ ಸೀಮೆಯ ಸಿರಿ ತೋರಿದ
ಇದ ಕಂಡು ಮನಸೋತು ಮೈದುಂಬಿದ ನನ್ನ
ಈ ಮಣ್ಣ ಹಾಡಿಂದ ಕವಿ ಮಾಡಿದ
*****
Tagged:

Leave a Reply

Your email address will not be published. Required fields are marked *

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...