ಅಭಿಮಾನದ ಹಣತೆ

ಹೊತ್ತಿಸು ಎದೆಯಲಿ ಕನ್ನಡಿಗ
ಅಭಿಮಾನದ ಹಣತೆ
ತಾಯ್ನಾಡಿಗೆ ಬೆಳಕಾಗುತಲಿ
ಕಾಯ್ದುಕೊ ನಿನ್ನ ಘನತೆ
ಇತಿಹಾಸದ ಪುಟಪುಟದಲ್ಲೂ
ಬೆಳಗಿದೆ ಕರುನಾಡು
ಏತಕೊ ಏನೋ ಸೊರಗುತಿದೆ
ಈ ದಿನದಲಿ ನೋಡು
ಪೋಷಿಸಿ ಬೆಳಸಿಹ ಕಾವೇರಿ
ಹೊರಟಿಹಳು ಅಲ್ಲಿ
ನಮ್ಮಲ್ಲಿರದ ಅಭಿಮಾನ
ಕಾಣುತ ಅವರಲ್ಲಿ
ಮರೆಯಾಗುತಿದೆ ಕನ್ನಡವು
ಕನ್ನಡ ನೆಲದಲ್ಲೆ
ಕಾಯದಿದ್ದರೆ ನಾವಿಂದು
ಪರಕೀಯರು ಇಲ್ಲೆ
ಎದ್ದೋಳೋ ಏ ಕನ್ನಡಿಗ
ಅಭಿಮಾನವ ಚೆಲ್ಲಿ
ವೀರಬಾವುಟ ಹಾರಿಸುತ
ಮುಗಿಲೆತ್ತರದಲಿ
****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಲಯ
Next post ಬಾಲೆ ನಿನ್ನಯ ತಮ್ಮನೆಲ್ಲಿ?

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…