ಕನ್ನಡದ ಜನ

ಕನ್ನಡಕೆ ಕೈಯೆತ್ತಿ ಓ ನನ್ನ ಬಂಧುಗಳೆ
ಇಲ್ಲವಾದರೆ ತೊಲಗಿ ಈ ನೆಲದ ‘ಭಾರ’ಗಳೆ
ಉಂಡ ಅನ್ನದ ಋಣವ ತೀರಿಸದೆ ಏಕಿಂತು
ಮುಳ್ಳಾಗಿ ನಿಲ್ಲುವಿರಿ ತಾಯ್ ನಡೆವ ಹಾದಿಗೆ?
ಕನ್ನಡದ ಈ ನಾಡು ಸಿಂಗರದ ಬೀಡು
ಸಿಂಗರದ ಈ ಬೀಡು ಕವಿಗಳೆದೆ ಹಾಡು
ಹಾಡು ತುಂಬಿದ ನಾಡು ಶಾರದೆಯ ಬೀಡು
ಇಂತಲ್ಲಿ ಏಕೆ ನಿಮ್ಮಪಸ್ವರದ ಹಾಡು
ಕನ್ನಡದ ನಮ್ಮ ಜನ ತ್ಯಾಗಕೆ ಹೆಸರು
ತ್ಯಾಗ ತುಂಬಿದ ಇವರು ಶೌರ್ಯಕ್ಕೆ ತವರು
ಏನಾದರೇನಿವರು ಮನಃಶಾಂತಿ ಪ್ರಿಯರು
ತಾಳ್ಮೆಯ ಕಟ್ಟೊಡೆದರೆ ಕೆಡುಕರಿಗೆ ಯಮರು
ಈ ಸತ್ಯವರಿತದು ನೀವ್ ಬಾಳಿದರೆ ಕ್ಷೇಮ
ಇಲ್ಲವಾದರೆ ಇಲ್ಲೆ ನಿಮ್ಮ ನಿರ್ನಾಮ
‘ಸಾಧುಂಗೆ ಸಾಧುಂ’ ಇದು ಇವರ ನೇಮ
‘ಬಾಧಿಪ್ಪ ಕಲಿಗೆ’ ಭೀಮನದೇ ನಿಯಮ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಚ್ಚರ ತಪ್ಪಿದರೆ….
Next post ಕ್ವ?

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…