ಗಾಲಿಗಳು

ಎಷ್ಟೇ ಭಾಷೆಗಳಿರಲೀ ನೆಲದಲಿ
ಕನ್ನಡ ರಥಕವು ಗಾಲಿಗಳು
ಕರ್ನಾಟಕದ ಪ್ರಗತಿಯ ಪಥದಲಿ
ಗೌರವಾನ್ವಿತ ಪಾತ್ರಗಳು
ಕಾವೇರೀ ಜಲ ಕುಡಿಯುತ ತಣಿಯಲಿ
ನಮ್ಮೀ ಭಾಷಾ ಸೋದರರು
ಆಗಿಹ ಅನ್ಯಾಯವ ಅರಿಯುತಲಿ
ದುಡಿಯಲಿ ನ್ಯಾಯಕೆ ಬಾಂಧವರು
ಕನ್ನಡದನ್ನವ ಉಂಡವರು
ಕರುನಾಡವರೆನಿಸಿರುವವರು
ಬೆಳಗಾವಿಯ ಸಿರಿ ಸುಂದರ ಬೀಡಲಿ
ಅನ್ಯಭಾಷೆಯನು ನುಡಿವವರು
ಈ ಮಣ್ಣಿನ ತಾವ್ ಕನ್ನಡಿಗರೆಂಬ
ಸತ್ಯವನರಿದು ಮರೆತವರು
ಕಾಯಲಿ ಕನ್ನಡದೇಕೀಕರಣ
ಮರೆಯಲಿ ಕನಸಿದೆ ಛಿದ್ರೀಕರಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಕೇತ
Next post ಬೇಕು-ಬೇಡ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…