Home / ಕವನ / ಕವಿತೆ / ಬಲೆ ಜಿಪ್ಣ ಮುನಿಯ

ಬಲೆ ಜಿಪ್ಣ ಮುನಿಯ

ಊರಾಚೆ ಪಡಕಾನೆ ಇಟ್ಟೌನೆ ಮುನಿಯ-
ಬಲ್ ಜಿಪ್ಣ ಪಡಕಾನೆ ಯೆಜಮಾನ ಮುನಿಯ.
ಮನೇ ತಾಕ್ ಯಾರೋದ್ರು ಬೆದರ್‍ತಾನಾ ಮುನಿಯ-
ಯಾರ್ ಬಿಕ್ಸೆ ಬೇಡ್ತಾರ್‌ ಅಂತ್ ಎದರ್‍ತಾನಾ ಮುನಿಯ-
ಊರಾಚೆ ಪಡಕಾನೆ ಯೆಜಮಾನ ಮುನಿಯ-
ನಂ ಮುನಿಯ! ನಂ ಮುನಿಯ! ಜಿಪ್ಣ ನಂ ಮುನಿಯ! ೧

ಮನೇ ತಾಕ್ ಯಾರ್ ಬರ್‍ಲಿ ಕೂಗ್ತಾನ್ ಔನ್ ಕಿರ್‍ಲಿ-
ಬಂದೋರ್‍ಗೆ ಕೇಳೋಹಂಗ್ ಕೂಗ್ತಾನ್ ಆ ಮುನಿಯ
ಮನೆಯೋರ್‍ನ ಬೊಯ್ಯೋ ಹಂಗ್ ಕೂಗ್ತಾನ್ ಆ ಮುನಿಯ:
‘ಬೋರಯ್ಯ ತಂದ್ ಕೊಟ್ಟ ತಕೊಂಡೋದ್ ನೂರ?
ಮನೇಗ್ ಬೇರ್ ಆಕ್ಬೇಕಿನ್ ಮಂಗ್ಳೂರೆಂಚ್ ಸೂರ!
ತಕ್ಕೊಂಡೋದ್ ಮಕ್ಳಿನ್ನಾ ಬಡ್ಡಿ ಕೊಡ್ದಿರ್‍ಲಿ-
ಉಪ್ಗೂನೆ ವುಳಿಗೂನೆ ಕಾಸ್ ಎಲ್ಲಿಂದ್ ತರ್‍ಲಿ?
ಪರಪಂಚ ಕೆಟ್ಟೋಯ್ತು -ಬಲ್ ಪೂರ ಓಯ್ತು-
ಇಂಗಿದ್ರೆ ನಾವೆಲ್ಲ ಬಾಳ್ ಬದಕಿದಂಗಾಯ್ತು!
ತಕ್ಕೊಂಡೋರ್ ತಕ್ಕೊಂಡಂಗ್ ತಿನ್ಕಂಡ್ ಓಗ್ತಿರ್‍ಲಿ-
ಗಂಟ್ಟೆಲ್ಲ ಕಟ್ಟೋಯ್ತು ಇವ್ರತ್ರ ವೊರ್‍ಲಿ!
ಕಟ್ಬೇಕ್ ಇನ್ ಮಂಡೀಗೆ ಸಾವರದೆಂಟ್ ನೂರು!
ಮತ್ಬೇರೆ ಬ್ಯಾಂಕ್ಗಿನ್ನು ಎರಡ್ಸಾವರದ್ ನೂರು!

ಎಲ್ಲಿಂದ ತರಬೇಕೋ ದೇವರ್‍ಗೇ ಬೆಳಕು!
ಮಿಕ್ಕೋರೀಗ್ ಏನ್ ಗೊತ್ತು ಈ ಚೋಳಿನ್ ಚಳಕು!
ಕೇಳ್ದೋರಿಗ್ ಕೊಟ್ತಂದ್ರೆ ಅಸಲೇನೆ ಸ್ವಾಆ!
ಇನ್ನಾರನ್ ಕೇಳ್ಬೇಕೊ ಬಡ್ಡಿ? ಹ್ಹ್! ಹ್ಹ್! ಹ್ಹ್!
ತಕ್ಕೊಂಡೋರ್ ತೆರದಿರ್‍ಲಿ ಬೇಗ್ಬೇಗ ತಂದು
ಸತ್ತಾರ ವೋಯ್ತೀನಿ ವಿಸಗಿಸ ತಿಂದು! ೨

ಯೆಂಡದಂಗಡಿ ಮುನ್ಯಣ್ಣ! ಪಡಕಾನೆ ಮುನ್ಯ!
ಏನ್ ಏಳ್ಲಿ ನೀ ಕೊಡ್ಸೋ ಬಲ್ಬಲೆ ಪುನ್ಯ!
ಬೇಡಿದೋರ್‍ಗೆ ನೀಡ್ದಿದ್ರೆ ಪಾಪಾಂತ್ ಅಂದ್ರೆ
ಬೇಡೋಕ್ಕೂ ಮುಂಚೇನೆ ಬಾಕ್ಲ್ ಇಕ್ತ ಬಂದ್ರೆ
ಏನ್ ಏಳ್ಲಿ ಮುನ್ಯಣ್ಣ ನೀ ಕೊಡ್ಸೊ ಪುನ್ಯ!
ಜಿಪುಣಾಂದ್ರೆ ನಿನ್ ಬಿಟ್ರೆ ಬೇರಿಲ್ಲ ಮುನ್ಯ! ೩
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...