ನಂ ದೇವ್ರು ಮುನಿಯ

ಕೈ ಮುಗದು ಕರ್‍ಪೂರ ಅಚ್ಚಿ
ಕಾಸ್ಕೊಟ್ಟು ತಂಗನಕಾಯ್ ಚಚ್ಚಿ
ಅಡ್ಬಿದ್ರೆ ಕಲ್ಲೆಲ್ಲ ದೇವ್ರೆ!
ಇಲ್ದಿದ್ರೆ-‘ಜಾಕರ್ರ್ ಆವ್ರೆ!’ ೧

‘ಮುನ್ಯಣ್ಣ!’ ಅಂದ್ಕೊಂಡಿ ಬಂದಿ
ಝಲ್ ಝಲ್ನೆ ರೂಪಾಯ್ಗೋಳ್ ತಂದಿ
ಸುರಿತಿದ್ರೆ ಕೊಡತೌನೆ ಯೆಂಡ!
ಇಲ್ದಿದ್ರೆ ತರತೌನೆ ದಂಡ! ೨

ಮುನಿಯಂಗು ಆ ದೇವರ್‍ಗೂನೆ
ಯೆತ್ವಾಸಾನ್ ಏನೇಳ್ ನೋಡಾನೆ!
ಕಾಯ್ ಕೊಟ್ರೆ ದೇವು ಪರ್‍ಚಂಡ!
ಕಾಸ್ ಕೊಟ್ರೆ ಮುನಿಯನ್ದು ಯೆಂಡ! ೩

ದೇವ್ರನಕ ಕೊಡಲಿ ಕೊಡದಿರ್‍ಲಿ
ಮಾಡ್ತಾರೆ ಔನ್ಗೆ ನಂಸ್ಕಾರ;
ಮುನ್ಯ ಯೆಚ್ಚಳ್ತೆ ಬುಡದಿರ್‍ಲಿ
ಮಾಡ್ತಾರೆ ಔನ್ಗೆ ಸಂಸ್ಕಾರ! ೪

ಮುನಿಯಣ್ಣ! ನೀ ನಮಗೆ ದೇವ್ರು!
ನಾವನಕ ದಿನಾ ಬರಾವ್ರು!
ಕೊಡದಿದ್ರೆ ಯೆಚ್ಚಳತೆ ಯೆಂಡ-
ನಾವ್ ಕೊಡೊ ದುಡ್ ನಿಂಗೆ ದಂಡ! ೫
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರತ್ನಾಕರ
Next post ಪದ್ಯಗದ್ಯಗಳ ರಾಷ್ಟ್ರೀಯತೆ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys