Home / ಲೇಖನ / ವಿಜ್ಞಾನ / ವಿದ್ಯುತ್ ಬಿಲ್ಲೂಸಹ ಇನ್ನು ಕಂಪ್ಯುಟರಿಕೃತ ಯಂತ್ರದಿಂದ

ವಿದ್ಯುತ್ ಬಿಲ್ಲೂಸಹ ಇನ್ನು ಕಂಪ್ಯುಟರಿಕೃತ ಯಂತ್ರದಿಂದ

ತಪ್ಪು ಲೆಕ್ಕಾಚಾರ, ಕೂಡಿಸುವುದು, ಬಾಕಿ ತೋರಿಸುವುದು, ಮೀಟರ್‌ಗಳ ತಪ್ಪಿನಿಂದಾಗಿ ಹೆಚ್ಚು ಬಿಲ್ಲು ಬರೆದುಕೊಡುವುದು. ಇದೆಲ್ಲ ಗ್ರಾಹಕರಿಗೆ ಮಾಮೂಲಾಗಿದೆ. ಕೆ.ಪಿ.ಟಿ.ಸಿ. ಎಲ್. ನಿಂದಾದ ಕಿರಿಕಿರಿಗಳೆಂದು ಇದುವರೆಗೆ ಜನಭಾವಿಸಿದ್ದರು. ಇನ್ನು ಮುಂದೆ ಹಾಗಗಲಾರದು. ರಸೀದಿಯನ್ನಷ್ಟೇ ಕಂಪುಟರಿನಲ್ಲಿ ಕೊಡುವುದರ ಬದಲು ಮೀಟರ್ ರೀಡಿಂಗ್ ಸಹ ಪುಟ್ಟ ಯಂತ್ರದಲ್ಲಿ ತೋರಿಸಿ ಅಲ್ಲಿಯೇ ಒಂದಿಷ್ಟು ತಪ್ಪಾಗದಂತೆ ಬಿಲ್ಲುತೋರಿಸಿ, ರಸೀದಿ ನೀಡುವ ವ್ಯವಸ್ಥೆ ಗೊಳಿಸಲಾಗಿದೆ.

ನಗರ ಪಟ್ಟಣ ಪ್ರದೇಶಗಳಲ್ಲದೇ ಹಳ್ಳಿಹಳ್ಳಿಗೂ ತಲುಪಿ ಹೊಸ ಹೊಸ ರೀತಿಯ ವಿದ್ಯುತ್‌ಬಿಲ್ ನೀಡುವ ಮೂಲಕ ಗ್ರಾಹಕರಿಗೆ ಕುತೂಹಲ ಕೆರಳಿಸಿದೆ. ಹಿಂದಿನಂತೆ ಪದೇ ಪದೇ ತಲೆ ಎತ್ತಿ ನೋಡುವ ಕ್ರಿಯೆಗೆ ಸೆನ್ಸಾರ್ ಹಾಕಿರುವ ಈ ಯಂತ್ರ ಒಂದು ರೀತಿಯ ಕ್ಯಾಲ್ಯುಕುಲೇಟರ್ನಂತೆಯೇ ಕೆಲಸಮಾಡುತ್ತದೆ. ಮತ್ತು ವಿದ್ಯುತ್ ಮೂಲಕ ಬಿಲ್ಲು ನೀಡುವಾಗ ಒಮ್ಮೆ ಮೀಟರ್‌ನ ನಂಬರ್ ಹಾಗೂ ಮೀಟರ ಓಡಿರುವ ಯುನಿಟ್‌ಗಳನ್ನು ಫೀಡ್ ಮಾಡಿದರೆ ಸಾಕು. ಮಿಕ್ಕೆಲ್ಲ ಕೆಲಸಗಳನ್ನು ತನ್ನಿಂದ ತಾನೇ ಮಾಡಿ ಬಾಕಿ ಹಣ ಉಳಿದಿದ್ದರೆ ಅದನ್ನು ಸುಲಭವಾಗಿ ಈ ಯಂತ್ರ ತೋರಿಸುತ್ತದೆ. ಆರಂಭದಲ್ಲಿ ಕೆಲ ಬಿಲ್ಲುಗಳ ರೀಡರ್‌ಗಳ ತಪ್ಪಿನಿಂದಾಗಿ ಗೊಂದಲ ಸೃಷ್ಟಿಯಾಗುತ್ತಿತ್ತು. ಈ ಕಂಪ್ಯೂಟರಿಕೃತ ಬಿಲ್‌ರೀಡಿಂಗ್ ಯಂತ್ರವು ಸುವ್ಯವಸ್ಥಿತವಾಗಿ ಗೊಂದಲಗಳನ್ನು ನಿವಾರಿಸಿ ನೂತನ ಯಂತ್ರದ ಸಹಾಯದಿಂದ ಗ್ರಾಹಕರಿಗೆ ತಲುಪಿಸುತ್ತದೆ (ರಸೀದಿ) . ಜತೆಗೆ ಬಿಲ್ ಫೀಡ್ ಮಾಡಿದವರ ಹೆಸರೂ ಸಹ ಇದರಲ್ಲಿ ಅಚ್ಚಾಗಿರುತ್ತದೆ. ಒಟ್ಟಿನಲ್ಲಿ ವಿದ್ಯುತ್ ರೀಡಿಂಗ್ ಬಿಲ್ ಸಹ ಕಂಪ್ಯೂಟರೀಕರಣಗೊಂಡುದದು ಆಧುನಿಕತೆಗೆ ಸಾಕ್ಷಿಯಾಗಿದೆ. ಈ ಬಿಲ್ ರೀಡಿಂಗ್ ನಿಂದ ರಸೀದಿ ಪುಸ್ತಕಗಳನ್ನು ಮಾಡಿಸುವುದು, ಅವುಗಳನ್ನು ಫೈಲ್ ಮಾಡುವುದು ಕೂಡ ತಪ್ಪುತ್ತದೆ. ಇದು ಪ್ರತಿ ತಿಂಗಳೂ ಬರುತ್ತದೆ. ಈ ಯಂತ್ರದಿಂದ ಕಾರ್ಯಕ್ಷಮತೆ ಹೆಚ್ಚುತ್ತದೆ. ಗ್ರಾಹಕರಿಗೆ ಯಾಂತ್ರೀಕೃತ ಬಿಲ್ ನೀಡುವ ಮೂಲಕ ರಸೀದಿಯಲ್ಲಿ ತಿದ್ದುವ ತಪ್ಪು ಲೆಕ್ಕ ಬರೆಯಲು ಆಸ್ಪದ ಆಗದೇ ಇರುವುದರಿಂದ ಇದೊಂದು ವಿಜ್ಞಾನ ಕ್ಷೇತ್ರದ ಕೊಡುಗೆಯಾಗಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...