Home / ಲೇಖನ / ವಿಜ್ಞಾನ / ಆಯುಷ್ಯ ವರ್ಧಕವಾದ ಮೊಸರು

ಆಯುಷ್ಯ ವರ್ಧಕವಾದ ಮೊಸರು

ಬಲ್ಗೇರಿಯಾ ದೇಶದಲ್ಲಿ ಶತಾಯುಷಿಗಳ ಆಯುಷ್ಯದ ಗುಟ್ಟೇನು? ಎಂದು ತಿಳಿಯಲು ವಯೋವೃದ್ದರನ್ನು (ನೂರಾರುಜನ) ಬೇಟಿ ಮಾಡಿ ಪರೀಕ್ಷಿಸಿದಾಗ ಅದರಲ್ಲಿ ಸೆ. ೯೦ ಭಾಗ ಮೊಸರನ್ನೇ ಹೇರಳವಾಗಿ ಉಪಯೋಗಿಸುತ್ತಿದ್ದರೆಂದು ತಿಳಿದು ಬಂದಿತು. ಇದರಿಂದಾಗಿ ಸರಳವಾಗಿ ಮೊಸರಿನಲ್ಲಿರುವ ಆಯುಷ್ಯವರ್‍ಧಕದ ಸತ್ಯ ಬೆಳಕಿಗೆ ಬಂದಿತು. ಇದರಂತೆ ರಷಿಯಾದ ಪ್ರಖ್ಯಾತ ಆಹಾರ ತಜ್ಞ ಹಾಗೂ ಸಂಶೋಧಕರೂ ಆದ ಡಾ|| ಮೆಜ್‌ನಿಕೋಫ್‌ರವರು ಮೊಸರಿನಿಂದ ಅಕಾಲ ಮುಪ್ಪನ್ನು ತಡೆಗಟ್ಟಬಹುದಲ್ಲದೇ ಕರುಳಿಗೆ ಸಂಬಂಧಿಸಿದ ರೋಗಗಳನ್ನು ನಿವಾರಿಸಬಹುದೆಂದು ವೈಜ್ಞಾನಿಕವಾಗಿ ಸಾಬೀತುಪಡಿಸಿದರು. ಮೊಸರಿಗೆ ಪ್ರಸಿದ್ಧಿ ಪಡೆದಿದ್ದ ಬಲ್ಗೇರಿಯಾ ನಂತರ ಇರಾನ್, ಇರಾಕ್ ರಷಿಯಾ, ಮತ್ತು ಯುರೋಪಿಗಳಿಗೆ ಈ ಪ್ರಸಿದ್ಧಿಯನ್ನು ಬಿಟ್ಟುಕೊಟ್ಟಿತು. ಸ್ವಾರಸ್ಯವೆಂದರೆ ರಷಿಯಾದಲ್ಲಿ ಹಸು, ಎಮ್ಮೆಗಳ ಹಾಲಿನಿಂದಲ್ಲದೇ ಕುರಿ, ಕತ್ತೆ ಮತ್ತು ಆಡುಗಳ ಹಾಲಿನಿಂದಲೂ ಈ ಮೊಸರನು ಹೇರಳವಾಗಿ ತಯಾರಿಸಲಾಗುತ್ತದೆ.

ಮೊಸರಿನ ಸೇವನೆಯಿಂದ ಕರುಳಿನಲ್ಲಿನ ಬಹು ಅವಶ್ಯಕ ಜೀವಾಣುಗಳಾದ ಲೆಕ್ಟೋಬೆಸಿಲಿಸ್ ಹಾಗೂ ಎಫಿಡೋಫಿಲಸ್ ಬಲಗೊಳ್ಳುತ್ತವೆ. ಇವು ಕರುಳಿಗೆ ಬಂದು ತಲುಪುವ ಆಹಾರವನ್ನು ದೀರ್‍ಘಕಾಲ ಕೊಳೆಯದಂತೆ ಕಾಪಾಡುವುದಲ್ಲದೇ ಆಹಾರದಲ್ಲಿರಬಹುದಾದ ಮಾರಕ ಸೂಕ್ಷ್ಮ ಜೀವಿಗಳನ್ನು ನಾಶಪಡಿಸುವ ಗುಣ ಈ ಮೊಸರಿಗಿದೆ. ಪ್ರೊ. ಮೆಜ್‌ನಿಕೊಫ್‌ರವರ ಅಭಿಪ್ರಾಯದಂತೆ ಮನುಷ್ಯನ ದೊಡ್ಡ ಕರುಳಿನಲ್ಲಿರುವ ಕೆಲ ಜೀವಾಣುಗಳೇ ಅಕಾಲಮುಪ್ಪಿಗೆ ಹಾಗೂ ನಿಯಂತ್ರಣಕ್ಕೆ ಮೂಲ ಕಾರಣವಾಗುತ್ತವೆ. ಅದನ್ನು ಮೊಸರಿನ ಸೇವನೆಯಿಂದ ನಾಶಪಡಿಸಬಹುದು. ಕ್ಷಯರೋಗ, ಕಾಲರ, ವಿಷಮಸೀತಜ್ವರಗಳಿಗೆ ಕಾರಣವಾಗುವ ಅಂತಹ ಬ್ಯಾಕ್ಟಿರಿಯಾಗಳನ್ನು ಮೊಸರಿನಲ್ಲಿರಿಸಿದರೆ ಅವು ಸಾಯುತ್ತವೆ ಎಂಬುವುದನ್ನು ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.

ಇದು ಪೌಷ್ಟಿಕಾಂಶಗಳ ಆಹಾರ ಶುದ್ಧಮೊಸರಿನಲ್ಲಿ ಶೇ.೭ ರಷ್ಟು ಕೊಬ್ಬು ೩-೨ರಿಂದ ೩-೪ ರಷ್ಟು ಪ್ರೋಟಿನ್, ೫ ರಷ್ಟು ಲಾಕ್ಟಿಕ್ ಆಸಿಡ್, ೦.೧೪ ರಷ್ಟು ಕ್ಯಾಲ್ಸಿಯಂ, ೦.೦೯ ದಷ್ಟು ರಂಜಕ, ೦.೩ ರಷ್ಟು ಕಬ್ಬಿಣ ೫ ರಷ್ಟು ಲೆಕ್ಟೋಸ್ ಹಾಗೂ ೮೨ ರಿಂದ ೮೮ ಭಾಗ ನೀರು ಇರುತ್ತದೆ. ಡಾ || ವಿಲಿಯಂ ಮೈಕಿನ್ ಎಂಬ ಆಹಾರ ವಿಜ್ಞಾನಿಯು ಹಾಲಿಗಿಂತಲೂ ಮೊಸರಿನ ಸೇವನೆಯಿಂದ ಹೆಚ್ಚಿನ ಪಚನಶಕ್ತಿಯಾಗುತ್ತದೆಂದು ಹೇಳುತ್ತಾರೆ. ಇದು ಮೂತ್ರಪಿಂಡವು ಸಮರ್ಪಕವಾಗಿ ಕಾರ್‍ಯ ನಿರ್ವಹಿಸುವಂತೆಯೂ ನೋಡಿಕೊಳ್ಳುತ್ತದೆ.

ಚಳಿಗಾಲಕ್ಕಿಂತ ಬೇಸಿಗೆಯಲ್ಲಿ ಮೊಸರುಬೇಗನೇ ಹೆಪ್ಪು ಗಟ್ಟುತ್ತದೆ. ಚಾಳಿಗಾಲದಲ್ಲಿ ಮೊಸರನ್ನು ಪಾತ್ರೆಯೊಳಗೆ ಚನ್ನಾಗಿ ಲೇಪಿಸಿ ನಂತರ ಉಗುರುಬೆಚ್ಚಿಗಿನ ಹಾಲನ್ನು ಅದರೊಳಗೆ ಸುರಿದು ಸ್ವಲ್ಪ ಮೊಸರನ್ನು ಅದರ ಮೇಲೆ ಬೆರಸಬೇಕು. ಆ ನಂತರ ಪಾತ್ರೆಯ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿಕಟ್ಟಿ ಬಿಸಿಲಿನಲ್ಲಿಡಬೇಕು. ಈ ಸುಧಾರಿತ ವಿಧಾನದಲ್ಲಿ ೨-೩ ತಾಸುಗಳಲ್ಲಿಯೇ ಹಾಲು ಹೆಪ್ಪುಗಟ್ಟಿ ಮೊಸರಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...