Home / ಕವನ / ಕವಿತೆ / ಚಂದ್ರಚುಂಬಿತ ಯಾಮಿನೀ

ಚಂದ್ರಚುಂಬಿತ ಯಾಮಿನೀ

ಚಂದ್ರಚುಂಬಿತ ಯಾಮಿನೀ
ನವವಿರಹಿ ಚಿತ್ತೋನ್ಮಾದಿನೀ,
ಜಾರುತಿದೆ ಕಲನಾದಿನೀ,
ಅದೊ! ಹಾಡುತಿರುವಳು ಕಾಮಿನೀ.

ತರುಣಿ ವೀಣೆಯ ಮಿಡಿವಳು
ತಚ್ಛ್ರುತಿಗೆ ವಾಣಿಯನೆಳೆವಳು-
ಮಧುರಗೀತದ ನುಡಿಯೊಳು
ತನ್ನೆದೆಯ ಭಾವವ ಮೊಗೆವಳು:

ಒಲುಮೆ ಹೃದಯವ ಹೊಗಲು ಬಯಸಲು
ಆರು ತಡೆಯಲು ಬಲ್ಲರು?
ಎದೆಯ ಬಿಟ್ಟದು ಹಾರ ಬಯಸಲು
ಆರು ತಡೆಯಲು ಬಲ್ಲರು?

ಚೆಲುವೆ, ಯೌವನದೀಪ್ತಳು,
ಮೇಣೊಲುಮೆ ಕನಸೊಳಗಿರುವಳು.
ಒಲುಮೆನಚ್ಚನು ನಂಬಳು,
ಹೊಸ ಭಯಕೆ ತಲ್ಲಣಗೊಂಬಳು.

ಒಲುಮೆ ಹಕ್ಕಿಯು ಸುಳಿಯಲು
ಅದರಂದಕಚ್ಚರಿಗೊಂಡಳು.
‘ಒಲುಮೆ’ ಎಂದವಳರಿಯಳು
ತನ್ನೆದೆಯ ಗೂಡೊಳಗಿಟ್ಟಳು.

ಅಲ್ಲಿ ಹಕ್ಕಿಯು ಹಾಡಿತು;
ಮೇಣೆಂಥ ಚೈತ್ರವ ತಂದಿತು!
ಬಾಳನೆಂತದು ರಮಿಸಿತು!
ಹೊಸ ನಚ್ಚ ಮೋದವ ತೋರಿತು!

ಅದಕೆ ಅವಳಸು ಮೀಸಲು-
ಅದು ಹಾರಿಹೋಗದ ತೆರದೊಳು
ನೇಹಮೋಹದ ಸರಳೊಳು
ತನ್ನೆದೆಗೆ ಪಂಜರ ಬಿಗಿದಳು.

ಹುಚ್ಚಿ, ಒಲುಮೆಗೆ ಬಂಧವೆ?
ಅದ ಸೆರೆಯ ಕೊಳುವುದು ಸುಲಭವೆ?
ಬಯಸಿದೆಡೆಗದು ಪರಿವುದು,
ನರನೆದೆಯ ಪಾಳಂಗೈವುದು.

ಬಾಳ ಸಾರವ ಶೋಷಿಸಿ
ಹೊಸ ಬಯಕೆ ಬವಣೆಯ ತೋರಿಸಿ
ನುಸುಳಿದೊಲುಮೆಗೆ ಶಂಕಿಸಿ
ತಾ ಮಿಡುಕುತಿಹಳಾ ಮಾನಿಸಿ.

ಇಂದುರಂಜಿತ ಯಾಮಿನೀ
ಸುಖಿಜನರ ಚಿತ್ತಾಹ್ಲಾದಿನೀ;
ಗಾನಗೈವಳು ಕಾಮಿನೀ;
ಆ ವಾಣಿ ಹೃದ್ವಿದ್ರಾವಿಣೀ:

ಒಲುಮೆ ದಾಳಿಯನಿಡಲು ಜಗ್ಗದ
ಹೃದಯವುಂಟೇ ಮನುಜಗೆ?
ಒಲವ ಸೆರೆಯನು ಕೊಳುವ ಬಲ್ಮೆಯ
ಹೃದಯವುಂಟೇ ಮನುಜಗೆ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್