ಚಂದ್ರಚುಂಬಿತ ಯಾಮಿನೀ

ಚಂದ್ರಚುಂಬಿತ ಯಾಮಿನೀ
ನವವಿರಹಿ ಚಿತ್ತೋನ್ಮಾದಿನೀ,
ಜಾರುತಿದೆ ಕಲನಾದಿನೀ,
ಅದೊ! ಹಾಡುತಿರುವಳು ಕಾಮಿನೀ.

ತರುಣಿ ವೀಣೆಯ ಮಿಡಿವಳು
ತಚ್ಛ್ರುತಿಗೆ ವಾಣಿಯನೆಳೆವಳು-
ಮಧುರಗೀತದ ನುಡಿಯೊಳು
ತನ್ನೆದೆಯ ಭಾವವ ಮೊಗೆವಳು:

ಒಲುಮೆ ಹೃದಯವ ಹೊಗಲು ಬಯಸಲು
ಆರು ತಡೆಯಲು ಬಲ್ಲರು?
ಎದೆಯ ಬಿಟ್ಟದು ಹಾರ ಬಯಸಲು
ಆರು ತಡೆಯಲು ಬಲ್ಲರು?

ಚೆಲುವೆ, ಯೌವನದೀಪ್ತಳು,
ಮೇಣೊಲುಮೆ ಕನಸೊಳಗಿರುವಳು.
ಒಲುಮೆನಚ್ಚನು ನಂಬಳು,
ಹೊಸ ಭಯಕೆ ತಲ್ಲಣಗೊಂಬಳು.

ಒಲುಮೆ ಹಕ್ಕಿಯು ಸುಳಿಯಲು
ಅದರಂದಕಚ್ಚರಿಗೊಂಡಳು.
‘ಒಲುಮೆ’ ಎಂದವಳರಿಯಳು
ತನ್ನೆದೆಯ ಗೂಡೊಳಗಿಟ್ಟಳು.

ಅಲ್ಲಿ ಹಕ್ಕಿಯು ಹಾಡಿತು;
ಮೇಣೆಂಥ ಚೈತ್ರವ ತಂದಿತು!
ಬಾಳನೆಂತದು ರಮಿಸಿತು!
ಹೊಸ ನಚ್ಚ ಮೋದವ ತೋರಿತು!

ಅದಕೆ ಅವಳಸು ಮೀಸಲು-
ಅದು ಹಾರಿಹೋಗದ ತೆರದೊಳು
ನೇಹಮೋಹದ ಸರಳೊಳು
ತನ್ನೆದೆಗೆ ಪಂಜರ ಬಿಗಿದಳು.

ಹುಚ್ಚಿ, ಒಲುಮೆಗೆ ಬಂಧವೆ?
ಅದ ಸೆರೆಯ ಕೊಳುವುದು ಸುಲಭವೆ?
ಬಯಸಿದೆಡೆಗದು ಪರಿವುದು,
ನರನೆದೆಯ ಪಾಳಂಗೈವುದು.

ಬಾಳ ಸಾರವ ಶೋಷಿಸಿ
ಹೊಸ ಬಯಕೆ ಬವಣೆಯ ತೋರಿಸಿ
ನುಸುಳಿದೊಲುಮೆಗೆ ಶಂಕಿಸಿ
ತಾ ಮಿಡುಕುತಿಹಳಾ ಮಾನಿಸಿ.

ಇಂದುರಂಜಿತ ಯಾಮಿನೀ
ಸುಖಿಜನರ ಚಿತ್ತಾಹ್ಲಾದಿನೀ;
ಗಾನಗೈವಳು ಕಾಮಿನೀ;
ಆ ವಾಣಿ ಹೃದ್ವಿದ್ರಾವಿಣೀ:

ಒಲುಮೆ ದಾಳಿಯನಿಡಲು ಜಗ್ಗದ
ಹೃದಯವುಂಟೇ ಮನುಜಗೆ?
ಒಲವ ಸೆರೆಯನು ಕೊಳುವ ಬಲ್ಮೆಯ
ಹೃದಯವುಂಟೇ ಮನುಜಗೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಣಿಯೆಂಬೊ ಭಾಂವಕ
Next post ಆತ್ಮಸ್ಥೈರ್ಯ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys