ನವೋದಯಂ

ದಾನವಹೃತ ಮೇದಿನಿಯಂ
ದಂಷ್ಟಾಗ್ರದೊಳಿರಿಸಿ,
ಭೂದಾರಂ ಪಾತಾಳವ-
ನುಳಿದೆದ್ದನೋ ಎನಿಸಿ,
ದೂರದಿಗಂತದೊಳೊಪ್ಪಿದೆ-
ರವಿ ಮಂಡಿತ ಶೃಂಗಂ,
ನೀಲಾಚಲಮುದ್ದೀಪಿತ
ಪೂರ್ವೋದಧಿಸಂಗಂ.

ಕನ್ನೆಯ ನಿದ್ದೆಯು ಸಡಿಲಲು
ಮುತ್ತಿಟ್ಟನೋ ಧೀರಂ!
ಹೊಲ್ಲಳ ಶಾಪಂ ತೊಲಗಿತೊ
ಬಹುಗಾಢ ಗಭೀರಂ!
ಚಿನ್ಮುಖವಾಯಿತೊ ಲೋಕಂ,
ಉಕ್ಕುಕ್ಕಿತೊ ಹರ್ಷಂ!
ಸೋಜಿಗಮೇನೆಸಗಿಹುದೊ
ಇನಕರ ಸಂಸ್ಪರ್ಶಂ!

ಮಿಸುಮಿಸುಗಿದೆ ಪಸುರ್ಮುಡಿಯೊಳು
ಮಂಜಿನ ಹರಳುಹನಿ;
ಪಿಸುಮಾತೊಲು ದೆಸೆ ದೆಸೆಯೊಳು
ಹಬ್ಬಿದೆ ಎಲೆಯ ದನಿ;
ಚಿಲಿಪಿಲಿ ಹಾಡಿಗೆ ಗುಬ್ಬಿಯ
ಥಕ ಥೋಂ ಧಿಕ್ಕಿಟ್ಟಿ;
ಏನೀಕ್ಷಿಸಲಿಂತರಳಿದೆ
ತಾವರೆ ಹೂದಿಟ್ಟಿ!

ದಿನ ದಿನದಂತಲ್ಲೀ ದಿನ-
ನವಸುಂದರಮೆಲ್ಲಂ;
ಹೊಸ ಸೃಷ್ಟಿಯ ಕನಸೊಂದನು
ಬಗೆಗೊಂಡನೊ ನಲ್ಲಂ-
ಈ ಖಗವೀ ಮೃಗವೇ ನಗ-
ವೀ ವನ ಕಂದರವಂ,
ಮಂಜುಳನಾದಿನಿ ಧುನಿಯಂ,
ಸ್ವರ್ಣಾರುಣ ನಭವಂ.

ಪಗಲಂ ಈ ಚೆಂಬೆಳಕೊಲು –
ಆವುದೊ ಅನುರಾಗಂ,
ಎಲರಂ ಈ ಸೌರಭದೊಲು-
ಆವುದೊ ಅನುಭೋಗಂ,
ಬಗೆ ಬೆಳಗಿದೆ, ಮನಕಾಗಿದೆ-
ಅಂದಿನ ದಿನದಂತೆ,
ಮೋಹನನೆನ್ನ೦ ಮೋಹಿಸಿ
ರಾಸಕೆ ಕರೆದಂತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಬಸಾ ಮಾಡೂ ಹಾಡು
Next post ಉತ್ತಮ ಸಮಾಜದತ್ತ….

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…