ಹೊನಲ ಹಾಡು

ಸ್ಥವಿರ ಗಿರಿಯ ಚಲನದಾಸೆ,
ಮೂಕ ವನದ ಗೀತದಾಸೆ,
ಸೃಷ್ಟಿ ಹೊರೆಯ ಹೊತ್ತ ತಿರೆಯ
ನಗುವಿನಾಸೆ ನಾ.
ಬಾಳ್ವೆಗೆಲ್ಲ ನಾನೆ ನಚ್ಚು,
ಲೋಕಕೆಲ್ಲ ಅಚ್ಚುಮೆಚ್ಚು,
ನಾನೆ ನಾನೆ ವಿಧಿಯ ಹುಚ್ಚು,
ಹೊನಲ ರಾಣಿ ನಾ.

ಕಿರಣ ನೆಯ್ದ ಸರಿಗೆಯುಡಿಗೆ,
ಇರುಳು ಕೊಟ್ಟ ತಾರೆತೊಡಿಗೆ,
ಇಂದುಕಳೆಯ ಹೂವೆ ಮುಡಿಗೆ –
ದೇವಕನ್ಯ ನಾ.
ಬೆಳ್ಳಿ ನೊರೆಯ ನಗೆ ನಗುತ್ತ,
ತೆರೆಯ ನಿರಿಯ ಚಿಮುಕಿಸುತ್ತ,
ಕಡಲ ವರಿಸೆ ತವಕಿಸುತ್ತ,
ನಡೆವ ವಧುವೆ ನಾ.

ನಲಿತ ಕುಣಿತವೆನ್ನ ಶೀಲ,
ಚಲನವೆನ್ನ ಜೀವಾಳ,
ಲುಪ್ತಮಾಗೆ ದೇಶಕಾಲ
ಎನ್ನ ಗಾಯನಾ.
ದಡದ ಗಿಡಕೆ ಪುಷ್ಪಹಾಸ,
ಸನಿಯದಿಳೆಗೆ ಸಸ್ಯಹಾಸ,
ಹಾಸಕೀರ್ಣ, ಹಾಸಪೂರ್ಣ,
ಎನ್ನ ಜೀವನಾ.

ಹೂವಿನಾಸೆಯನ್ನು ತೋರಿ
ಎಲೆಯ ಕಣ್ಣನೀರ ಕಾರಿ
ರೆಂಬೆಯಡ್ಡಗಟ್ಟಿ, ಹಳುವು
ಆಡೆ ಕರೆವುದು;
ಬೆಟ್ಟ ಮುದ್ದು ಮಾಡಲೆಂದು,
ಮಡುವು ಹಾದಿ ತಂಗಲೆಂದು,
ಕಡಲು ಒಲುಮೆ ಸಾಲದೆಂದು-
ನನ್ನ ತಡೆವುದು.

ನಾನು ನಿಲ್ವುದೊಂದೆ ಚಣಂ
ಸತತ ಕರ್ಮವೆನ್ನ ಗುಣಂ
ಅದಕೆ, ಕಾಣೆ ಗೋಳನಣಂ
ಹರ್ಷಮೆನಗೆ ಚಿರಂತಣಂ.

ಗವಿಗಳಲ್ಲಿ ಹುಳನಡಗಿ
ಬಂಡೆ ಮೇಲೆ ಹವ್ವನೆರಗಿ
ಮಡುವಿನಿಂದ ಮೆಲನೆ ಜರುಗಿ
ಕಡಲಿಗೋಡುವೆ;
ಬಿಸಿಲ ಕೋಲ ಹಿಡಿದು ಹತ್ತಿ
ನೀರ ತೇರನೇರಿ ಸುತ್ತಿ
ತಿರುಗಿ ತಿರೆಯ ಮಡಿಲಿನಲ್ಲಿ
ಧುಮುಕಿ ಹರಿಯುವೆ.

ಅಚರ ಜಗದ ಚಲನದಾಸೆ
ಮೂಕ ಜಗದ ಗೀತದಾಸೆ
ನಿಯತಿ ನಿಯಮ ನಿಯತ ಜಗದ
ನಗುವಿನಾಸೆ ನಾ.
ವನವಿನೋದ, ಮಲೆಯ ಮೋದ,
ಮುಗಿಲ ಮೇಲ್ಮೆ, ನಾಡ ನಲ್ಮೆ,
ನಾನೆ ನಾನೆ ದಿವದ ಕೂರ್ಮೆ-
ಪೊನಲ ರಾಣಿ ನಾ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಯಕೆಯ ಹಾಡು
Next post ಮನಃಸಾಕ್ಷಿ- ಹೃದಯದ ಮಾತು

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…