Home / ಕವನ / ಕವಿತೆ / ಹೊನಲ ಹಾಡು

ಹೊನಲ ಹಾಡು

ಸ್ಥವಿರ ಗಿರಿಯ ಚಲನದಾಸೆ,
ಮೂಕ ವನದ ಗೀತದಾಸೆ,
ಸೃಷ್ಟಿ ಹೊರೆಯ ಹೊತ್ತ ತಿರೆಯ
ನಗುವಿನಾಸೆ ನಾ.
ಬಾಳ್ವೆಗೆಲ್ಲ ನಾನೆ ನಚ್ಚು,
ಲೋಕಕೆಲ್ಲ ಅಚ್ಚುಮೆಚ್ಚು,
ನಾನೆ ನಾನೆ ವಿಧಿಯ ಹುಚ್ಚು,
ಹೊನಲ ರಾಣಿ ನಾ.

ಕಿರಣ ನೆಯ್ದ ಸರಿಗೆಯುಡಿಗೆ,
ಇರುಳು ಕೊಟ್ಟ ತಾರೆತೊಡಿಗೆ,
ಇಂದುಕಳೆಯ ಹೂವೆ ಮುಡಿಗೆ –
ದೇವಕನ್ಯ ನಾ.
ಬೆಳ್ಳಿ ನೊರೆಯ ನಗೆ ನಗುತ್ತ,
ತೆರೆಯ ನಿರಿಯ ಚಿಮುಕಿಸುತ್ತ,
ಕಡಲ ವರಿಸೆ ತವಕಿಸುತ್ತ,
ನಡೆವ ವಧುವೆ ನಾ.

ನಲಿತ ಕುಣಿತವೆನ್ನ ಶೀಲ,
ಚಲನವೆನ್ನ ಜೀವಾಳ,
ಲುಪ್ತಮಾಗೆ ದೇಶಕಾಲ
ಎನ್ನ ಗಾಯನಾ.
ದಡದ ಗಿಡಕೆ ಪುಷ್ಪಹಾಸ,
ಸನಿಯದಿಳೆಗೆ ಸಸ್ಯಹಾಸ,
ಹಾಸಕೀರ್ಣ, ಹಾಸಪೂರ್ಣ,
ಎನ್ನ ಜೀವನಾ.

ಹೂವಿನಾಸೆಯನ್ನು ತೋರಿ
ಎಲೆಯ ಕಣ್ಣನೀರ ಕಾರಿ
ರೆಂಬೆಯಡ್ಡಗಟ್ಟಿ, ಹಳುವು
ಆಡೆ ಕರೆವುದು;
ಬೆಟ್ಟ ಮುದ್ದು ಮಾಡಲೆಂದು,
ಮಡುವು ಹಾದಿ ತಂಗಲೆಂದು,
ಕಡಲು ಒಲುಮೆ ಸಾಲದೆಂದು-
ನನ್ನ ತಡೆವುದು.

ನಾನು ನಿಲ್ವುದೊಂದೆ ಚಣಂ
ಸತತ ಕರ್ಮವೆನ್ನ ಗುಣಂ
ಅದಕೆ, ಕಾಣೆ ಗೋಳನಣಂ
ಹರ್ಷಮೆನಗೆ ಚಿರಂತಣಂ.

ಗವಿಗಳಲ್ಲಿ ಹುಳನಡಗಿ
ಬಂಡೆ ಮೇಲೆ ಹವ್ವನೆರಗಿ
ಮಡುವಿನಿಂದ ಮೆಲನೆ ಜರುಗಿ
ಕಡಲಿಗೋಡುವೆ;
ಬಿಸಿಲ ಕೋಲ ಹಿಡಿದು ಹತ್ತಿ
ನೀರ ತೇರನೇರಿ ಸುತ್ತಿ
ತಿರುಗಿ ತಿರೆಯ ಮಡಿಲಿನಲ್ಲಿ
ಧುಮುಕಿ ಹರಿಯುವೆ.

ಅಚರ ಜಗದ ಚಲನದಾಸೆ
ಮೂಕ ಜಗದ ಗೀತದಾಸೆ
ನಿಯತಿ ನಿಯಮ ನಿಯತ ಜಗದ
ನಗುವಿನಾಸೆ ನಾ.
ವನವಿನೋದ, ಮಲೆಯ ಮೋದ,
ಮುಗಿಲ ಮೇಲ್ಮೆ, ನಾಡ ನಲ್ಮೆ,
ನಾನೆ ನಾನೆ ದಿವದ ಕೂರ್ಮೆ-
ಪೊನಲ ರಾಣಿ ನಾ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...