Home / ಕವನ / ಕವಿತೆ / ಮೀನಕನ್ಯೆ

ಮೀನಕನ್ಯೆ

ಚಾರು ಶಾರದ ಸಂಧ್ಯೆ,
ನೀರ ನೀಲಾಕಾಶ
ಪೇರಾಳದರ್ಣವವ ಹೋಲುತಿತ್ತು.
ಜಲಸಸ್ಯ ನಿವಹದೊಲು
ಜಲದವಂಚಿನೊಳಿತ್ತು,
ಎಳೆಯ ಪೆರೆ ಪಾತಾಳ ಯಾನದಂತೆ.

ಬಾನಿನಂತರದಲ್ಲಿ
ಮೀನಂತೆ ತೇಲಿದುವು
ವೈನತೇಯಗಳೆರಡು ಗರಿಯಲುಗದೆ.
ಅಡಿಯೊಳಗೆ ನಾನಿದ್ದೆ
ಕಡಲ ಕರುಮಾಡದೊಳು
ಬಿಡುವಿಗೆಳಸುವ ಮೀನಕನ್ಯೆಯಂತೆ.

“ಮೇಲೆ ಮೇಲೇರುತ್ತ
ನೀಲಸೀಮೆಯ ಮೀರೆ
ಲೀಲೆಯಿಂದೋಪನನು ಸೇರಲಳವು.
ಈಯಾಸೆ ಹುಚ್ಚಲ್ಲ,
ಆಯಾಸವಿನಿತಿಲ್ಲ,
ಕಾಯವೂ ನೆರವಿದಕೆ” ಎಂದಿತೊಲವು.

ಬಾಳುಬಾಳನು ಹಾಯ್ದು
ಬಾಳ ನಚ್ಚನು ಹೊಯ್ದು
ಕಾಳೋರಗಾಮಿಯೊಲು ನೆನಹು ನುಸುಳಿ,
“ನೀ ತಿರಸ್ಕೃತೆ, ಅದಕೆ
ಈ ತೆರದ ಬಾಳಾಯ್ತು,
ಏತಕೀ ಬಯಲಾಸೆ ನಿನಗೆಂ”ದಿತು.

ಎಂಥ ಕುಲ, ಎಂಥ ಚಲ,
ಎಂಥ ಮೋಹಕ ಕಾಯ,
ಎಂಥ ಕರಣದ ದೌತ್ಯ, ಮನದ ಮಂತ್ರ!
ಅಂತರಂಗಕೆ ಸಲ್ಲೆ
ಎಂಥ ನೋಂಪಿಯ ನೋಂತು
ಇಂತಿದೆಲ್ಲವ ಪಡೆದೆ! ಎಂತು ವ್ಯರ್ಥ!

ಚಾರು ಶಾರದ ಸಂಧ್ಯೆ,
ನೀರ ನೀಲಾಕಾಶ
ಪೇರಾಳದಬ್ದಿಯನು ಹೋಲುತಿತ್ತು.
ಆ ಮಹಾರ್ಣವ ತಲದಿ
ಕಾಮಹತ ನಾನಿದ್ದೆ
ಪ್ರೇಮವಂಚಿತ ಮೀನಕನ್ಯೆಯಂತೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...