Home / ಕವನ / ಕವಿತೆ / ನಂದಿಯ ಬೆಟ್ಟದ ಮೇಲುಗಡೆ

ನಂದಿಯ ಬೆಟ್ಟದ ಮೇಲುಗಡೆ

ಬೇಡದೆ ಬಿಸುಡಿದ ವಸ್ತುವೊಲಾಯ್ತಿಳೆ
ಕೆಳ ಕೆಳಗಾಳದ ಕಣಿವೆಯೊಳು;
ಕಪ್ಪೆಯ ಗೂಡೋ, ಹುತ್ತವೊ ಇದು ಎನೆ
ನಗೆಗೇಡಾಯಿತು ನೆರೆಹೊಳಲು;
ಕೆರೆಯೋ ಕೊಚ್ಚೆಯೊ, ಪೈರೋ ಪಾಚೆಯೊ,
ಹಳುವೋ ಹುಲ್ಗಾವಲ ಹರಹೋ?
ಎನ್ನುತ ಭ್ರಮಿಸುವ ತೆರವಿಂದಾಯಿತು
ನಂದಿಯ ಬೆಟ್ಟದ ಮೇಲುಗಡೆ.

ಐರಾವತವೆನೆ ಬಿಳಿಮುಗಿಲಾನೆಯ
ಸದರದಿ ಮುಟ್ಟುತ ನೇವರಿಸಿ,
ಕುಸುಮಾವಳಿಯೆನೆ ಬಾನಿನ ನೀಲವ
ಟೊಂಗೆಯ ತುದಿಯೊಳು ದೋಲಯಿಸಿ,
ಚಿರ ಯೌವನವೆನೆ ಹಸುರನು ಮೆರೆಯಿಸಿ,
ಜುಮ್ಮೆನೆ ಸುರಭಿಯ ನಿಃಶ್ವಸಿಸಿ,
ದನಿಯೊಳು ನೆಳಲೊಳು ಚೋದ್ಯಂಗೊಳಿಸುವ
ಬನವಿದಿಗೋ ಮಲೆ ಮೇಲುಗಡೆ!

ಕಿರುದೆರೆಕುದುರೆಯ ರವಿರಾವುತರನು
ಕೊಳದಂಗಣದೊಳಗೋಡಿಸುತ,
ಚಣಕೂ ಚೆದರುವ ಮೋಡದ ಮಂದೆಗೆ
ಬಾನಿನ ಬಯಲೊಳಗೂಳಿಡುತ,
ತಲೆ ಕೆದರುತ, ಮೈ ಕುಣಿಸುತ ತರುಗಳ
ಹುಡುಗಾಟಕೆ ಹುಯಿಲಿಡಿಸುತ್ತ,
ತಿಣ್ಣನೆ ಮಂದಿಯ ತುಡುಕುತ, ಜಡತೆಯ
ಕಸಿಯುವೆಲರ್ ಮಲೆ ಮೇಲುಗಡೆ.

ಪಗಲಿರುಳಾಗಿಸಿ ದೆಸೆಯೊಗ್ಗೂಡಿಸಿ
ಲೋಕವ ಮೋಹಿಸುತುರವಣಿಸಿ,
ಘುಡು ಘುಡಿಸುತಸುತಲಾರ್ಭಟಿಸುತ ಫಳ್ಳನೆ
ಪಲ್ಕಿಯುತ ಭೀಕರನೆನಿಸಿ,
ಬುದ್ಧನ ಮಾರನೊಲಚಲವ ತಾಗುತ
ಹಮ್ಮುಳಿದೋಡಲು ಕಾರ್ಮುಗಿಲು,
ನಗುತಿಹ ದೇವರ ದಿವ್ಯಸ್ಮಿತವೆನೆ
ಮಳೆಬಿಸಿಲಿದೂ ಮಲೆ ಮೇಲುಗಡೆ.

ಸೊದೆಯಂತಸುವನು ಬಿಸಿಲುದ್ದೀಪಿಸೆ
ನಲಿದುಲಿದಾಡುವೆ-ಸುರನವೊಲು;
ಕೈಯೆಡೆ ಕೋಡೊಳು ರೆಕ್ಕೆಯಗೊಳ್ಳಲು
ಮುಗಿಲುತ್ಸುಕಿಸುವೆ-ಯಕ್ಷನೊಲು;
ಗಿರಿಶನೊಲದ್ರಿಯ ನಡೆವ ಮಹಾತ್ಮನ
ಹಿಂಬಾಲಿಸುವೆನು- ಗಣರವೊಲು;
ಅಮರ್ತ್ಯಚೇತನರನೇಕಭಾವಗ-
ಳಿಂತೆನಗಹುದೈ ಮೇಲುಗಡೆ.

ಮೆಲ್ಲನೆ ಮೆಲ್ಲನೆ ಬೆಳುದೆಸೆ ದಳಗಳ
ತಿರೆ ಹೂ ಮುಚ್ಚಲು, ಇರುಳಿಳಿಯೆ,
ಶಾಂತನ ತೇಜಸ್ವಿಯ ಸಾನ್ನಿಧ್ಯದಿ
ತಮ್ಮೊಳಬೆಳಕೊಳು ಜನವೆಸೆಯೆ,
ಶ್ರುತಿ ನುಡಿಯಲು, ನುತಿಯೊಗೆಯಲು, ಕರಣಗ-
ಳಮಿತಾಚರಣೆಯ ಸುತನವೊಲು
ದಣಿದಾತ್ಮದ ಬಳಿಗೈತರ-ಅಹ ಏ-
ನುತ್ಸವವೋ ಮಲೆ ಮೇಲುಗಡೆ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...