Home / ಕವನ / ಕವಿತೆ / ನಂದಿಯ ಬೆಟ್ಟದ ಮೇಲುಗಡೆ

ನಂದಿಯ ಬೆಟ್ಟದ ಮೇಲುಗಡೆ

ಬೇಡದೆ ಬಿಸುಡಿದ ವಸ್ತುವೊಲಾಯ್ತಿಳೆ
ಕೆಳ ಕೆಳಗಾಳದ ಕಣಿವೆಯೊಳು;
ಕಪ್ಪೆಯ ಗೂಡೋ, ಹುತ್ತವೊ ಇದು ಎನೆ
ನಗೆಗೇಡಾಯಿತು ನೆರೆಹೊಳಲು;
ಕೆರೆಯೋ ಕೊಚ್ಚೆಯೊ, ಪೈರೋ ಪಾಚೆಯೊ,
ಹಳುವೋ ಹುಲ್ಗಾವಲ ಹರಹೋ?
ಎನ್ನುತ ಭ್ರಮಿಸುವ ತೆರವಿಂದಾಯಿತು
ನಂದಿಯ ಬೆಟ್ಟದ ಮೇಲುಗಡೆ.

ಐರಾವತವೆನೆ ಬಿಳಿಮುಗಿಲಾನೆಯ
ಸದರದಿ ಮುಟ್ಟುತ ನೇವರಿಸಿ,
ಕುಸುಮಾವಳಿಯೆನೆ ಬಾನಿನ ನೀಲವ
ಟೊಂಗೆಯ ತುದಿಯೊಳು ದೋಲಯಿಸಿ,
ಚಿರ ಯೌವನವೆನೆ ಹಸುರನು ಮೆರೆಯಿಸಿ,
ಜುಮ್ಮೆನೆ ಸುರಭಿಯ ನಿಃಶ್ವಸಿಸಿ,
ದನಿಯೊಳು ನೆಳಲೊಳು ಚೋದ್ಯಂಗೊಳಿಸುವ
ಬನವಿದಿಗೋ ಮಲೆ ಮೇಲುಗಡೆ!

ಕಿರುದೆರೆಕುದುರೆಯ ರವಿರಾವುತರನು
ಕೊಳದಂಗಣದೊಳಗೋಡಿಸುತ,
ಚಣಕೂ ಚೆದರುವ ಮೋಡದ ಮಂದೆಗೆ
ಬಾನಿನ ಬಯಲೊಳಗೂಳಿಡುತ,
ತಲೆ ಕೆದರುತ, ಮೈ ಕುಣಿಸುತ ತರುಗಳ
ಹುಡುಗಾಟಕೆ ಹುಯಿಲಿಡಿಸುತ್ತ,
ತಿಣ್ಣನೆ ಮಂದಿಯ ತುಡುಕುತ, ಜಡತೆಯ
ಕಸಿಯುವೆಲರ್ ಮಲೆ ಮೇಲುಗಡೆ.

ಪಗಲಿರುಳಾಗಿಸಿ ದೆಸೆಯೊಗ್ಗೂಡಿಸಿ
ಲೋಕವ ಮೋಹಿಸುತುರವಣಿಸಿ,
ಘುಡು ಘುಡಿಸುತಸುತಲಾರ್ಭಟಿಸುತ ಫಳ್ಳನೆ
ಪಲ್ಕಿಯುತ ಭೀಕರನೆನಿಸಿ,
ಬುದ್ಧನ ಮಾರನೊಲಚಲವ ತಾಗುತ
ಹಮ್ಮುಳಿದೋಡಲು ಕಾರ್ಮುಗಿಲು,
ನಗುತಿಹ ದೇವರ ದಿವ್ಯಸ್ಮಿತವೆನೆ
ಮಳೆಬಿಸಿಲಿದೂ ಮಲೆ ಮೇಲುಗಡೆ.

ಸೊದೆಯಂತಸುವನು ಬಿಸಿಲುದ್ದೀಪಿಸೆ
ನಲಿದುಲಿದಾಡುವೆ-ಸುರನವೊಲು;
ಕೈಯೆಡೆ ಕೋಡೊಳು ರೆಕ್ಕೆಯಗೊಳ್ಳಲು
ಮುಗಿಲುತ್ಸುಕಿಸುವೆ-ಯಕ್ಷನೊಲು;
ಗಿರಿಶನೊಲದ್ರಿಯ ನಡೆವ ಮಹಾತ್ಮನ
ಹಿಂಬಾಲಿಸುವೆನು- ಗಣರವೊಲು;
ಅಮರ್ತ್ಯಚೇತನರನೇಕಭಾವಗ-
ಳಿಂತೆನಗಹುದೈ ಮೇಲುಗಡೆ.

ಮೆಲ್ಲನೆ ಮೆಲ್ಲನೆ ಬೆಳುದೆಸೆ ದಳಗಳ
ತಿರೆ ಹೂ ಮುಚ್ಚಲು, ಇರುಳಿಳಿಯೆ,
ಶಾಂತನ ತೇಜಸ್ವಿಯ ಸಾನ್ನಿಧ್ಯದಿ
ತಮ್ಮೊಳಬೆಳಕೊಳು ಜನವೆಸೆಯೆ,
ಶ್ರುತಿ ನುಡಿಯಲು, ನುತಿಯೊಗೆಯಲು, ಕರಣಗ-
ಳಮಿತಾಚರಣೆಯ ಸುತನವೊಲು
ದಣಿದಾತ್ಮದ ಬಳಿಗೈತರ-ಅಹ ಏ-
ನುತ್ಸವವೋ ಮಲೆ ಮೇಲುಗಡೆ!
*****

Tagged:

Leave a Reply

Your email address will not be published. Required fields are marked *

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...