Home / ಕವನ / ಕವಿತೆ / ನಂದಿಯ ಬೆಟ್ಟದ ಮೇಲುಗಡೆ

ನಂದಿಯ ಬೆಟ್ಟದ ಮೇಲುಗಡೆ

ಬೇಡದೆ ಬಿಸುಡಿದ ವಸ್ತುವೊಲಾಯ್ತಿಳೆ
ಕೆಳ ಕೆಳಗಾಳದ ಕಣಿವೆಯೊಳು;
ಕಪ್ಪೆಯ ಗೂಡೋ, ಹುತ್ತವೊ ಇದು ಎನೆ
ನಗೆಗೇಡಾಯಿತು ನೆರೆಹೊಳಲು;
ಕೆರೆಯೋ ಕೊಚ್ಚೆಯೊ, ಪೈರೋ ಪಾಚೆಯೊ,
ಹಳುವೋ ಹುಲ್ಗಾವಲ ಹರಹೋ?
ಎನ್ನುತ ಭ್ರಮಿಸುವ ತೆರವಿಂದಾಯಿತು
ನಂದಿಯ ಬೆಟ್ಟದ ಮೇಲುಗಡೆ.

ಐರಾವತವೆನೆ ಬಿಳಿಮುಗಿಲಾನೆಯ
ಸದರದಿ ಮುಟ್ಟುತ ನೇವರಿಸಿ,
ಕುಸುಮಾವಳಿಯೆನೆ ಬಾನಿನ ನೀಲವ
ಟೊಂಗೆಯ ತುದಿಯೊಳು ದೋಲಯಿಸಿ,
ಚಿರ ಯೌವನವೆನೆ ಹಸುರನು ಮೆರೆಯಿಸಿ,
ಜುಮ್ಮೆನೆ ಸುರಭಿಯ ನಿಃಶ್ವಸಿಸಿ,
ದನಿಯೊಳು ನೆಳಲೊಳು ಚೋದ್ಯಂಗೊಳಿಸುವ
ಬನವಿದಿಗೋ ಮಲೆ ಮೇಲುಗಡೆ!

ಕಿರುದೆರೆಕುದುರೆಯ ರವಿರಾವುತರನು
ಕೊಳದಂಗಣದೊಳಗೋಡಿಸುತ,
ಚಣಕೂ ಚೆದರುವ ಮೋಡದ ಮಂದೆಗೆ
ಬಾನಿನ ಬಯಲೊಳಗೂಳಿಡುತ,
ತಲೆ ಕೆದರುತ, ಮೈ ಕುಣಿಸುತ ತರುಗಳ
ಹುಡುಗಾಟಕೆ ಹುಯಿಲಿಡಿಸುತ್ತ,
ತಿಣ್ಣನೆ ಮಂದಿಯ ತುಡುಕುತ, ಜಡತೆಯ
ಕಸಿಯುವೆಲರ್ ಮಲೆ ಮೇಲುಗಡೆ.

ಪಗಲಿರುಳಾಗಿಸಿ ದೆಸೆಯೊಗ್ಗೂಡಿಸಿ
ಲೋಕವ ಮೋಹಿಸುತುರವಣಿಸಿ,
ಘುಡು ಘುಡಿಸುತಸುತಲಾರ್ಭಟಿಸುತ ಫಳ್ಳನೆ
ಪಲ್ಕಿಯುತ ಭೀಕರನೆನಿಸಿ,
ಬುದ್ಧನ ಮಾರನೊಲಚಲವ ತಾಗುತ
ಹಮ್ಮುಳಿದೋಡಲು ಕಾರ್ಮುಗಿಲು,
ನಗುತಿಹ ದೇವರ ದಿವ್ಯಸ್ಮಿತವೆನೆ
ಮಳೆಬಿಸಿಲಿದೂ ಮಲೆ ಮೇಲುಗಡೆ.

ಸೊದೆಯಂತಸುವನು ಬಿಸಿಲುದ್ದೀಪಿಸೆ
ನಲಿದುಲಿದಾಡುವೆ-ಸುರನವೊಲು;
ಕೈಯೆಡೆ ಕೋಡೊಳು ರೆಕ್ಕೆಯಗೊಳ್ಳಲು
ಮುಗಿಲುತ್ಸುಕಿಸುವೆ-ಯಕ್ಷನೊಲು;
ಗಿರಿಶನೊಲದ್ರಿಯ ನಡೆವ ಮಹಾತ್ಮನ
ಹಿಂಬಾಲಿಸುವೆನು- ಗಣರವೊಲು;
ಅಮರ್ತ್ಯಚೇತನರನೇಕಭಾವಗ-
ಳಿಂತೆನಗಹುದೈ ಮೇಲುಗಡೆ.

ಮೆಲ್ಲನೆ ಮೆಲ್ಲನೆ ಬೆಳುದೆಸೆ ದಳಗಳ
ತಿರೆ ಹೂ ಮುಚ್ಚಲು, ಇರುಳಿಳಿಯೆ,
ಶಾಂತನ ತೇಜಸ್ವಿಯ ಸಾನ್ನಿಧ್ಯದಿ
ತಮ್ಮೊಳಬೆಳಕೊಳು ಜನವೆಸೆಯೆ,
ಶ್ರುತಿ ನುಡಿಯಲು, ನುತಿಯೊಗೆಯಲು, ಕರಣಗ-
ಳಮಿತಾಚರಣೆಯ ಸುತನವೊಲು
ದಣಿದಾತ್ಮದ ಬಳಿಗೈತರ-ಅಹ ಏ-
ನುತ್ಸವವೋ ಮಲೆ ಮೇಲುಗಡೆ!
*****

Tagged:

Leave a Reply

Your email address will not be published. Required fields are marked *

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...