ಶರಾವತೀ ಜಲಪಾತ ನಿರ್ಘೋಷ

ಜಗವೆ ಯಾತ್ರಿಕನಾಗೆ ಚೆಲುವ ದೇವಿಗೆ ಹರಸಿ,
ಚೇತನದ ಸೌಂದರ್ಯದೀಪ್ಸಿತವ ಸಲಿಸುವೀ
ಪಾತದದ್ಭುತ ಭೀಮಕಾಂತ ಕಮನೀಯತೆಗೆ
ಬಗೆ ಸೋತುದಂತಿರಲಿ, ಕಣ್ಣಾಸೆ ಮಿಕ್ಕಿರಲಿ;

ಆಲಿಸಾದೊಡೆ, ಕೆಳೆಯ, ನಿನ್ನಾತ್ಮವರಳುವೊಡೆ,
ಈ ನದಿಯ ಚಿತ್ರತರ ಭ್ರಗುಪತನ ಘೋಷವನು-
ಮೌನದಳತೆಗೆ ಶಬ್ದ ಬೆಳೆಯುವೀ ಮಾಟವನು!
ಕೇಳೆ ಕಿವಿ ಬೆದರುತಿರೆ, ನಾದವಾಹಿನಿ ಎಂತು,

ದೊರೆಯ ಬಿಡುಗಡೆಗೆಂದು ನಡೆತರುವ ಪಡೆಯಂತೆ,
ಕರಣಗಳ ಜರ್ಝರಿಸಿ, ಮತಿ ಮುತ್ತಿ, ಅರಿವಳಿಸಿ,
ಸೆರೆ ಸಿಲುಕಿದಾತ್ಮವನು – ತನ್ನ ಹಿರಿಮೆಗು ಮೀರೆ-
ದೊರೆತನದಿ ನಿಲಿಸುತಿದೆ ಸೃಷ್ಟಿ ಸಿಂಹಾಸನದಿ!

ಶಶಿ, ತಾರೆ, ಜಲಧಾರೆ, ಈ ಮೋದವಿಭವದಂತೆ
ತೋರುತಿವೆ-ಘೋಷ, ಕೃತಕೃತಿಯ ಜಯಘೋಷದಂತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಾಂವಕ್ಕಿ ಕುಟ್ಟಂದ್ರ
Next post ಮೋಡಿ ಹಲವು

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…