ಋತದ ಮೊದಲ ಕಣಸು

ಸೃಷ್ಟಿ ಸ್ವಯಂಪ್ರಭೆಯಗುಹೆಯ ದಾರಿಗನಾಗಿ
ಚೇತನಂ ನಡೆಯುತಿರೆ, ವಿಸ್ಮಯಂಗೊಳಿಸಿತಿದ
ನೂತನದ ನಸುಕೊಂದು ಒಂದೆಡೆಯೊಳ್ ; ಅದರಿಂದ
ಸ್ಪಷ್ಟ ಮಂದದಕಾಯ್ತು ಅಹಮಸ್ಮಿ ಎಂಬರಿವು.

ನಾನುಂಟು’ ಎನ್ನುತಿದು ಹಿಗ್ಗಿ ಕಣ್ಮನ ತೆರೆಯ-
ಲೆನಿತು ಭಯಮಾಯ್ತದಕೆ ಇಹದ ರಚನೆಯ ಕಂಡು!
ಘೃಣೆಯಿರದ ಮಿತಿಯಿರದ ತದ್ಛಿನ್ನ ಬಹುವಿನೊಳು
ಏನೆಡರ ಕಂಡಿತಿದು ತನ್ನ ಬಾಳನು ನಡಸೆ!

ಇಂತು ದುಃಖಿತದೇಹಿ ತತ್ತ್ವರಯುದಯವನು
ಮೊಟ್ಟಮೊದಲೀಕ್ಷಿಸುತ, ಋತದ ಶ್ರುತಿಯೊಳು ನಡೆವ
ವ್ಯಷ್ಟಿ ವಿವಿಧ ಸ್ವರಗಳುದ್ಗೀಥವಾಲಿಸುತ,
ಎಂತು ನನೆಕೊನೆವೋಯ್ತೊ ಆ ಸುಪ್ರಭಾತದೊಳು!

ಎಂತು ದನಿಗೂಡಿಸಿತೊ ಸೋಹಮೋಂ ಸೋಹಮೆಂದು
ಎಂತು ಭಯ ನೀಗಿತೋ ನಂದಮಾನಂದಮೆಂದು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೀನನ ಹಾಡು
Next post ಒಬ್ಬನೆಂದರೊಬ್ಬನೇ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…