Home / ಕವನ / ಕವಿತೆ / ಬಯಕೆಯ ಹಾಡು

ಬಯಕೆಯ ಹಾಡು

ಕಸಕಸಿ ಕೊಬ್ಬರಿ ಹಸನುಳ್ಳ ಜಿಲಿಬಿಲಿ|
ಬಿಸಿಯ ಹೂರಣಗಡಬ ಬಿಳಿಯ ಬೆಲ್ಲಽಽ|
ರಸಬಾಳಿ ಖಬ್ಬ ಸುಲಿದು ಮುಂದಿಟ್ಟರ|
ಇಸಮಾಡಿ ಒಂದ ತುತ್ತ ತಿಂದೇನ ತಾಯಿ|
ಬಂಕಿ ಕಾಡತಾವ ತಾಯಿ ಪರಿಪರಿಯಿಂದ
ಬಂಕಿ ಕಾಡತಾವ ||೧||

ಆಕಳ ಹಾಲಾಗ ದುಮ್ಮಸ ಮಾಡ|
ಪರಡಿ ಸವತೀಬೀಜ ಪಾಯಸ ಮಾಡ|
ಯಾಲಕ್ಕಾಯ ಪತ್ತುರಿ ಜಾಜಿಕಾಯಿ ಮೊದಲುಮಾಡಿ|
ಇಷ್ಟ ಸಾಹಿತನೆಲ್ಲ ಹದಮಾಡ ತಾಯಿ|
ಬಂಕಿ ಕಾಡತಾವ ||೨||

ಗಂಗಾಳ ಝರಗಿ ಝಳಝಳ ಬೆಳಗ|
ತೆಂಬೀಗಿ ತುಂಬಿ ಬದಿಯಲ್ಲಿ ಇಡಽ|
ಡೊಣ್ಣಿ ತುಂಬ ತುಪ್ಪ ತಂದು ಮುಂದಿಟ್ಟಿರ|
ಬಟ್ಟೆದ್ದಿ ಬಾಯಾಗ ಇಟ್ಟೀನ ತಾಯಿ|
ಬಂಕಿ ಕಾಡತಾವ ||೩||

ಎಳ್ಳ ಹಚ್ಚಿದ ರೊಟ್ಟಿ ಎಣ್ಣಿ ಬದನೀಕಾಯಿ|
ಮಸರ ಕಲಸಿದ ಬುತ್ತಿ ಬಿಸಿಯ ಬಾನ|
ಅಲ್ಲ, ಮಾಗುಣಿ ಬೇರ, ಬೆಲ್ಲ, ಬೆಳವಲದ್ಹಣ್ಣ|
ಮನ ಬೇಡಿ ನನ ಜೀವ ಬಗಸ್ಯಾದ ತಾಯಿ|
ಬಂಕಿ ಕಾಡತಾವ ||೪||

ಹೋಳಿಹೆಣ್ಣಿವಿ ಸುತ್ತ ತನುಗಾಳಿ ಬೀಸ್ಯಾವ|
ಮಾಳೀಗಿ ಏರಿ ಬೆಳಖಿಂಡಿ ಮುಚ್ಚ|
ಬಣ್ಣಽದ ಹಚ್ಚಡ ಬಿಗಿಬಿಗಿದು ಹೊಚ್ಚಿದರ|
ಕಣ್ತುಂಬ ಒಂದು ನಿದ್ದಿ ಮಾಡೇನ ತಾಯೀ|
ಬಂಕಿ ಕಾಡತಾವ ||೫||

ಕುಂತಽರ ಆಕಡಿಕಿ ನಿಂತರ ತೂಕಡಿಕಿ|
ತಾಳಲಾರೆನೆ ತಾಯಿ ತೋಳಾರೆ ತಾರ|
ಮಂಚಕ ಒಪ್ಪತ ಹಾಸೀಗಿ ಮಾಡ|
ಮಂಚಕ ಎನ್ನ ಎಳದ್ಹಾಕ ತಾಯೀ|
ಬಂಕಿ ಕಾಡತಾವ ||೬||
*****
ಬಯಕೆಯ ಹಾಡು

ಒಬ್ಬ ಗರ್ಭಿಣಿಗೆ ಬಯಕೆಗಳು ಕಾಡುತ್ವೆ. ಅವಳು ತಾಯಿಯಲ್ಲಿ ತನ್ನ ಬಯಕೆಗಳನ್ನೆಲ್ಲ ಬೇಡುತ್ತಾಳೆ. ಅವಳ ಸಲಿಗೆಯ ಮಾತು ಹೇಳುವ ಬಗೆ ಎಶ್ಟು ಸೊಗಸಾಗಿವೆ; `ಕಸಕಸಿ ಕೊಬ್ಬರಿ, ಹೆಸನುಳ್ಳ ಜಿಲಿಬಿಲಿ, ಬಿಳಿಯ ಬೆಲ್ಲದ ಬಿಸಿಯ ಹೊರಣಗಡುಬು… ಇವನ್ನು ಮುಂದಿಟ್ಟರೆ ಇಸಮಾಡಿ ಒಂದು ತುತ್ತ ತಿಂದೇನು’ ಎನ್ನುತ್ತಾಳೆ! ಇದರಂತೆಯೆ `ಬಟ್ಟೆದ್ದಿ ಬಾಯಾಗ ಇಟ್ಟೇನು ತಾಯಿ’ `ತಾಳಲಾರೆನೆ ತಾಯಿ ತೋಳಾರೆ ತಾರ’-ಮೊದಲಾದುವು.

ಛಂದಸ್ಸು:- ಕುಸುಮಷಟ್ಟದಿಗೆ ಹೊಂದುತ್ತದೆ.

ಶಬ್ದ ಪ್ರಯೋಗಗಳು:- ಇಸ=ವಿಷ. ದುಮ್ಮಸ ಮಾಡ=ಅದರಲ್ಲಿ ಅಡಿಗೆ ಮಾಡು. ಮಸರ=ಮೊಸರು. ಬಾನ=ಬೋನ. ತನುಗಾಳಿ=ತಂಪುಗಾಳಿ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...