Home / ಕವನ / ಕವಿತೆ / ಬಯಕೆಯ ಹಾಡು

ಬಯಕೆಯ ಹಾಡು

ಕಸಕಸಿ ಕೊಬ್ಬರಿ ಹಸನುಳ್ಳ ಜಿಲಿಬಿಲಿ|
ಬಿಸಿಯ ಹೂರಣಗಡಬ ಬಿಳಿಯ ಬೆಲ್ಲಽಽ|
ರಸಬಾಳಿ ಖಬ್ಬ ಸುಲಿದು ಮುಂದಿಟ್ಟರ|
ಇಸಮಾಡಿ ಒಂದ ತುತ್ತ ತಿಂದೇನ ತಾಯಿ|
ಬಂಕಿ ಕಾಡತಾವ ತಾಯಿ ಪರಿಪರಿಯಿಂದ
ಬಂಕಿ ಕಾಡತಾವ ||೧||

ಆಕಳ ಹಾಲಾಗ ದುಮ್ಮಸ ಮಾಡ|
ಪರಡಿ ಸವತೀಬೀಜ ಪಾಯಸ ಮಾಡ|
ಯಾಲಕ್ಕಾಯ ಪತ್ತುರಿ ಜಾಜಿಕಾಯಿ ಮೊದಲುಮಾಡಿ|
ಇಷ್ಟ ಸಾಹಿತನೆಲ್ಲ ಹದಮಾಡ ತಾಯಿ|
ಬಂಕಿ ಕಾಡತಾವ ||೨||

ಗಂಗಾಳ ಝರಗಿ ಝಳಝಳ ಬೆಳಗ|
ತೆಂಬೀಗಿ ತುಂಬಿ ಬದಿಯಲ್ಲಿ ಇಡಽ|
ಡೊಣ್ಣಿ ತುಂಬ ತುಪ್ಪ ತಂದು ಮುಂದಿಟ್ಟಿರ|
ಬಟ್ಟೆದ್ದಿ ಬಾಯಾಗ ಇಟ್ಟೀನ ತಾಯಿ|
ಬಂಕಿ ಕಾಡತಾವ ||೩||

ಎಳ್ಳ ಹಚ್ಚಿದ ರೊಟ್ಟಿ ಎಣ್ಣಿ ಬದನೀಕಾಯಿ|
ಮಸರ ಕಲಸಿದ ಬುತ್ತಿ ಬಿಸಿಯ ಬಾನ|
ಅಲ್ಲ, ಮಾಗುಣಿ ಬೇರ, ಬೆಲ್ಲ, ಬೆಳವಲದ್ಹಣ್ಣ|
ಮನ ಬೇಡಿ ನನ ಜೀವ ಬಗಸ್ಯಾದ ತಾಯಿ|
ಬಂಕಿ ಕಾಡತಾವ ||೪||

ಹೋಳಿಹೆಣ್ಣಿವಿ ಸುತ್ತ ತನುಗಾಳಿ ಬೀಸ್ಯಾವ|
ಮಾಳೀಗಿ ಏರಿ ಬೆಳಖಿಂಡಿ ಮುಚ್ಚ|
ಬಣ್ಣಽದ ಹಚ್ಚಡ ಬಿಗಿಬಿಗಿದು ಹೊಚ್ಚಿದರ|
ಕಣ್ತುಂಬ ಒಂದು ನಿದ್ದಿ ಮಾಡೇನ ತಾಯೀ|
ಬಂಕಿ ಕಾಡತಾವ ||೫||

ಕುಂತಽರ ಆಕಡಿಕಿ ನಿಂತರ ತೂಕಡಿಕಿ|
ತಾಳಲಾರೆನೆ ತಾಯಿ ತೋಳಾರೆ ತಾರ|
ಮಂಚಕ ಒಪ್ಪತ ಹಾಸೀಗಿ ಮಾಡ|
ಮಂಚಕ ಎನ್ನ ಎಳದ್ಹಾಕ ತಾಯೀ|
ಬಂಕಿ ಕಾಡತಾವ ||೬||
*****
ಬಯಕೆಯ ಹಾಡು

ಒಬ್ಬ ಗರ್ಭಿಣಿಗೆ ಬಯಕೆಗಳು ಕಾಡುತ್ವೆ. ಅವಳು ತಾಯಿಯಲ್ಲಿ ತನ್ನ ಬಯಕೆಗಳನ್ನೆಲ್ಲ ಬೇಡುತ್ತಾಳೆ. ಅವಳ ಸಲಿಗೆಯ ಮಾತು ಹೇಳುವ ಬಗೆ ಎಶ್ಟು ಸೊಗಸಾಗಿವೆ; `ಕಸಕಸಿ ಕೊಬ್ಬರಿ, ಹೆಸನುಳ್ಳ ಜಿಲಿಬಿಲಿ, ಬಿಳಿಯ ಬೆಲ್ಲದ ಬಿಸಿಯ ಹೊರಣಗಡುಬು… ಇವನ್ನು ಮುಂದಿಟ್ಟರೆ ಇಸಮಾಡಿ ಒಂದು ತುತ್ತ ತಿಂದೇನು’ ಎನ್ನುತ್ತಾಳೆ! ಇದರಂತೆಯೆ `ಬಟ್ಟೆದ್ದಿ ಬಾಯಾಗ ಇಟ್ಟೇನು ತಾಯಿ’ `ತಾಳಲಾರೆನೆ ತಾಯಿ ತೋಳಾರೆ ತಾರ’-ಮೊದಲಾದುವು.

ಛಂದಸ್ಸು:- ಕುಸುಮಷಟ್ಟದಿಗೆ ಹೊಂದುತ್ತದೆ.

ಶಬ್ದ ಪ್ರಯೋಗಗಳು:- ಇಸ=ವಿಷ. ದುಮ್ಮಸ ಮಾಡ=ಅದರಲ್ಲಿ ಅಡಿಗೆ ಮಾಡು. ಮಸರ=ಮೊಸರು. ಬಾನ=ಬೋನ. ತನುಗಾಳಿ=ತಂಪುಗಾಳಿ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...