Home / ಕವನ / ಕವಿತೆ / ಉಡಿತುಂಬುವ ಹಾಡು

ಉಡಿತುಂಬುವ ಹಾಡು

ಬಾಳಿಽಯ ಬನ ಚೆಲುವಽ|
ಬಾಳಿಽಯ ಗೊನೊ ಚೆಲುವಽ|
ಬಾಳ್ಯಾಗ ಇರುವ ಗಿಽಣಿ ಚೆಲುವಽಽ| ಸೋಬಾನಮ||
ಬಾಳಿಯಾಗಽಽ ಇರುವ ಗಿಣಿ ಚೆಲುವ ತಮ್ಮನ
ಬಾಗಲಽ ಮಾಟ ಕರಚೆಲುವ| ಸೋ… ||೧||

ನಿಂಬೀಯ ಬನ ಚೆಲುವಾಽ|
ನಿಂಬೀಯ ಗೊನಿ ಚೆಲುವಾಽ|
ನಿಂಬ್ಯಾಗ ಇರುವ ಗಿಣಿಽ ಚೆಲುವ| ಸೋ…
ನಿಂಬಿಯಾಗಽ ಇರುವ ಗಿಣಿ ಚೆಲುವ ತಮ್ಮನ
ಕಂಬಽದ ಮಾಟ ಕರಚೆಲುವ| ಸೋ ||೨||

ನಿಂಬೀಯ ಬನದಾಗ ಚಂದರನ ಕಾವಲ|
ಬಂದಽವರ್‍ಯಾರ ಒಳಹೊರಗಽ| ಸೋ….
ಬಂದುವವಽರ್‍ಯಾರ ಒಳಹೊರಗಽ ತಂಗೆವನ
ಅಪ್ಪದವರಲ್ಲ ಪರಮಂದೆ| ಸೋ… ||೩||

ಬಾಳೀಯ ಬನದಾಗ ಭಾವನ ಕಾವಲ|
ಬಂದಽವರ್‍ಯಾರ ಒಳಹೊರಗಽ| ಸೋ….
ಬಂದುವವಽರ್‍ಯಾರ ಒಳಹೊರಗಽ ತಂಗೆವನ
ಅವ್ವದವರಲ್ಲ ಪರಮಂದೆ| ಸೋ ||೪||

ಅತ್ತಿಕಾಯೀ ತಂದು ಅತ್ತೆ ಉಡಿಯಲಿ ತುಂಬಿ|
ಅತ್ತ್ಯೆದ್ದು ಹರಕಿ ಕುಡತಾಳಽ| ಸೋ…
ಅತ್ತೆಽಯೆದ್ದು ಹರಕಿ ಕುಡತಾಳ ತಂಗೆವಗ
ಹತ್ತು ಮಕ್ಕಽಳ ಹಡೆಯೆಂದು| ಸೋ ||೫||

ಮಾವಿನ ಕಾಯಿ ತಂದು ಮಾವ ಉಡಿಯಲಿ ತುಂಬಿ|
ಮಾಯಽದ ಮಕ್ಕಳ ಹಡೆಯೆಂದು| ಸೋ…
ಮಾಯಽದ ಮಕ್ಕಳ ಹಡೆಯೆಂದು ತಂಗೆವಗ|
ಮಾವ ಬಂದ್ಹರಕಿ ಕೊಡೆತಾನ| ಸೋ ||೬||

ಬಾಳಿಕಾಯೀ ತಂದು ಭಾವ ಉಡಿಯಲಿ ತುಂಬಿ|
ಭಾವ ಎದ್ದು ಹೆರಕಿ ಕೊಡೆತಾನ| ಸೋ…
ಭಾವ ಎದ್ದು ಹರಕಿ ಕೊಡೆತಾನ ತಂಗೆವ್ವಾ|
ಭಾಳ ಮಕ್ಕಽಳ ಹಡೆಯವ್ವಾ| ಸೋ ||೭||

ಅತ್ತಿಂದ ಬಂದಾವ ಮುತ್ತಿನೆರಡಾರೂತಿ|
ಉಪ್ಪರಗಿ ಗಗನ ತುಳುಕೂತ। ಸೋ…
ಉಪ್ಪುವರಗಿಽ ಗಗನ ತುಳುಕೂತ ತಂಗೆವ್ವನ|
ಆತ್ತೆಯಾರೂತಿ ಬೆಳಗ್ಯಾಳ| ಸೋ ||೮||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...