Home / ಕವನ / ಕವಿತೆ / ತೊಟ್ಟಿಲಲ್ಲಿ ಹಾಕುವ ಹಾಡು

ತೊಟ್ಟಿಲಲ್ಲಿ ಹಾಕುವ ಹಾಡು

ಶಿಂದೀಗಿ ತಳದಳದಲ್ಲಿ ಸಂಗಮ್ಮನಽ ತಳ|
ಶಂಭೋ ಮಠದೇವ ಇಂದುದಯನಾಗೊ| ಜೋ ಜೋ||

ಭಂಗಾರ ತೊಟ್ಟೀಲ ಧೊರಿತಾಯಿ! ಕುಂದಲ|
ಸಿಂಗರದಾನ ಶ್ರೀಕೃಷ್ಣಗ ಛಂದಾಗಿ ತೂಗಾರಿ| ಜೋ…||

ಕರೆದು ಬಂದೆವು ಓಣಿ ನೆರೆದು ಬಂದಿತು ಮಂದಿ|
ಬಂದು ನಿಂತಾರವ್ವ ಕನ್ನಿ ಮುತ್ತೈದ್ಯಾರು| ಜೋ…||

ಸಕ್ಕರಿ ಪಾಯಸ ಬಸಿದು ಬಟ್ಟಲ ತುಂಬಿ|
ತುತಮಾಡಿ ಉಣಿಸಿದರ ಬಿಕಿಬಿಕಿ ಅಳತಾನ| ಜೋ…||

ಸಾದ ಸಿರಿಗಂಧ ತಯದು ಬಟ್ಟಲ ತುಂಬಿ|
ತೀಡಿ ತೀಡಿ ಹೆಚ್ಚಿದರ ಕಾಡಿ ಕಾಡಿ ಅಳತಾನ| ಜೋ…||

ನಾಗಬಂದೀನಂಗಿ ನಡುವಿನ ಮ್ಯಾಲ ತೊಡಸಿ|
ಆಡ್ಲಕ್ಕ ಹೋಗಂದ್ರ ಬೋರ್‍ಯಾಡಿ ಅಳತಾನ| ಜೋ…||

ಬಿಂದೂಲಿ ಇಡಸೀದ ಬಿಳಿಯಂಗಿ ತೊಡಸಿದ|
ಆಡಿ ಬಾ ಕಂದಂದ್ರ ಕಾಡಿ ಕಾಡಿ ಅಳತಾನ| ಜೋ…||

ನೀರಾಗ ನೆಳ ನೋಡಿ ಸೂರ್‍ಯ ಚಂದ್ರನ ಬೇಡಿ|
ಅದರಂಗ ತಾ ಬೇಡಿ ಬೋರ್‍ಯಾಡಿ ಅಳತಾನ| ಜೋ…||

ಎಳೆಮ್ಮಿ ನೊರೆಹಾಲ ತೊಟ್ಟಿಲದಾಗಿಟ್ಟೀದ|
ಆಡಿ ಬಂದ್ಕುಡಿಯಂದ್ರ ಕಾಡಿಕಾಡ್ಯಳತಾನ| ಜೋ…||
*****
ತೊಟ್ಟಿಲಲ್ಲಿ ಹಾಕುವ ಹಾಡು

ಹುಟ್ಟಿದ ಹನ್ನೆರಡನೆಯ ದಿನ ಕೂಸನ್ನು ತೊಟ್ಟಿಲಲ್ಲಿ ಹಾಕಿ ಹೆಸರಿಡುತ್ತಾರೆ. ಆಗ ಜೋಗುಳಹಾಡನ್ನು ಹಾಡುತ್ತಾರೆ. ಇಲ್ಲಿ ಕೊಟ್ಟಿರುವುದನ್ನು ಆ ಸಮಯದಲ್ಲಿ ಹಾಡುವರಾದರೂ ನಿತ್ಯಶಃ ಕೂಸನ್ನು ತೂಗುವಾಗ ಹೇಳಲಾಗುವಂತೆ ಇದರಲ್ಲಿಯ ವರ್ಣನೆಯ ವಿವರಗಳಿವೆ.

ಶಬ್ದ ಪ್ರಯೋಗಗಳು:- ಸಿಂದಿಗಿ=ಒಂದು ಊರು. ತಳ=ಸ್ಥಳ. ಸಾದ=ಕಪ್ಪು. ಬಿಂದೂಲಿ=ಮುಂಗೈಯ ಆಭರಣ. ನೆಳ=ನೆರಳು. ಅದರಂಗ=ಅದರಂತಹದನ್ನು.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...