Home / ಕವನ / ಕವಿತೆ / ತೊಟ್ಟಿಲಲ್ಲಿ ಹಾಕುವ ಹಾಡು

ತೊಟ್ಟಿಲಲ್ಲಿ ಹಾಕುವ ಹಾಡು

ಶಿಂದೀಗಿ ತಳದಳದಲ್ಲಿ ಸಂಗಮ್ಮನಽ ತಳ|
ಶಂಭೋ ಮಠದೇವ ಇಂದುದಯನಾಗೊ| ಜೋ ಜೋ||

ಭಂಗಾರ ತೊಟ್ಟೀಲ ಧೊರಿತಾಯಿ! ಕುಂದಲ|
ಸಿಂಗರದಾನ ಶ್ರೀಕೃಷ್ಣಗ ಛಂದಾಗಿ ತೂಗಾರಿ| ಜೋ…||

ಕರೆದು ಬಂದೆವು ಓಣಿ ನೆರೆದು ಬಂದಿತು ಮಂದಿ|
ಬಂದು ನಿಂತಾರವ್ವ ಕನ್ನಿ ಮುತ್ತೈದ್ಯಾರು| ಜೋ…||

ಸಕ್ಕರಿ ಪಾಯಸ ಬಸಿದು ಬಟ್ಟಲ ತುಂಬಿ|
ತುತಮಾಡಿ ಉಣಿಸಿದರ ಬಿಕಿಬಿಕಿ ಅಳತಾನ| ಜೋ…||

ಸಾದ ಸಿರಿಗಂಧ ತಯದು ಬಟ್ಟಲ ತುಂಬಿ|
ತೀಡಿ ತೀಡಿ ಹೆಚ್ಚಿದರ ಕಾಡಿ ಕಾಡಿ ಅಳತಾನ| ಜೋ…||

ನಾಗಬಂದೀನಂಗಿ ನಡುವಿನ ಮ್ಯಾಲ ತೊಡಸಿ|
ಆಡ್ಲಕ್ಕ ಹೋಗಂದ್ರ ಬೋರ್‍ಯಾಡಿ ಅಳತಾನ| ಜೋ…||

ಬಿಂದೂಲಿ ಇಡಸೀದ ಬಿಳಿಯಂಗಿ ತೊಡಸಿದ|
ಆಡಿ ಬಾ ಕಂದಂದ್ರ ಕಾಡಿ ಕಾಡಿ ಅಳತಾನ| ಜೋ…||

ನೀರಾಗ ನೆಳ ನೋಡಿ ಸೂರ್‍ಯ ಚಂದ್ರನ ಬೇಡಿ|
ಅದರಂಗ ತಾ ಬೇಡಿ ಬೋರ್‍ಯಾಡಿ ಅಳತಾನ| ಜೋ…||

ಎಳೆಮ್ಮಿ ನೊರೆಹಾಲ ತೊಟ್ಟಿಲದಾಗಿಟ್ಟೀದ|
ಆಡಿ ಬಂದ್ಕುಡಿಯಂದ್ರ ಕಾಡಿಕಾಡ್ಯಳತಾನ| ಜೋ…||
*****
ತೊಟ್ಟಿಲಲ್ಲಿ ಹಾಕುವ ಹಾಡು

ಹುಟ್ಟಿದ ಹನ್ನೆರಡನೆಯ ದಿನ ಕೂಸನ್ನು ತೊಟ್ಟಿಲಲ್ಲಿ ಹಾಕಿ ಹೆಸರಿಡುತ್ತಾರೆ. ಆಗ ಜೋಗುಳಹಾಡನ್ನು ಹಾಡುತ್ತಾರೆ. ಇಲ್ಲಿ ಕೊಟ್ಟಿರುವುದನ್ನು ಆ ಸಮಯದಲ್ಲಿ ಹಾಡುವರಾದರೂ ನಿತ್ಯಶಃ ಕೂಸನ್ನು ತೂಗುವಾಗ ಹೇಳಲಾಗುವಂತೆ ಇದರಲ್ಲಿಯ ವರ್ಣನೆಯ ವಿವರಗಳಿವೆ.

ಶಬ್ದ ಪ್ರಯೋಗಗಳು:- ಸಿಂದಿಗಿ=ಒಂದು ಊರು. ತಳ=ಸ್ಥಳ. ಸಾದ=ಕಪ್ಪು. ಬಿಂದೂಲಿ=ಮುಂಗೈಯ ಆಭರಣ. ನೆಳ=ನೆರಳು. ಅದರಂಗ=ಅದರಂತಹದನ್ನು.

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...