Home / ಕವನ / ಕವಿತೆ / ನೂಲೊಲ್ಲ್ಯಾಕ ಚೆನ್ನೀ?

ನೂಲೊಲ್ಲ್ಯಾಕ ಚೆನ್ನೀ?

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ರಾಟಲಿಲ್ಲೋ ಜಾಣಾ!
ರಾಟಲಿಲ್ಲೋ ಜಾಣಾ!

ಕತೆಗಾರ:
ಮನಿಯಾನ ಬಂಡೀ ಮುರಿಸಿ
ಮನಿಯಾನ ಬಂಡೀ ಮುರಿಸಿ
ರಾಟೀ ಮಾಡಿಸಿ ಕೊಟ್ಟಾ
ರಾಟೀ ಮಾಡಿಸಿ ಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಕದರಿಲ್ಲೊ ಜಾಣಾ!
ಕದರಿಲ್ಲೊ ಜಾಣಾ!

ಕತೆಗಾರ:
ಕೈಯಾನ ಗುದ್ದಲಿ ಮುರಿಸಿ
ಕೈಯಾನ ಗುದ್ದೆಲಿ ಮುರಿಸಿ
ಕದರ ಮಡಿಸಿ ಕೊಟ್ಟಾ
ಕದರ ಮಾಡಿಸಿ ಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಚಿಲ್ಲಿಲ್ಲೊ ಜಾಣಾ!
ಚಿಲ್ಲಿಲ್ಲೊ ಜಾಣಾ!

ಕತೆಗಾರ:
ಮನಿಯಾನ ಕೋಣವು ಕಡಿಸಿ
ಮನಿಯಾನ ಕೋಣವು ಕಡಿಸಿ
ಚಿಲ್ಲು ಮಾಡಿಸಿಕೊಟ್ಟಾ
ಚಿಲ್ಲು ಮಾಡಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಹಮ್ಮಿಗಿಲ್ಲಲೊ ಜಾಣಾ!
ಹಮ್ಮಿಗಿಲ್ಲಲೊ ಜಾಣಾ!

ಕತೆಗಾರ:
ನಡುವಿನ ಉಡದಾರ ಕಡಿದು
ನಡುವಿನ ಉಡದಾರ ಕಡಿದು
ಹಮ್ಮಿಗಿ ಮಾಡಿಸಿಕೊಟ್ಟಾ
ಹಮ್ಮಿಗಿ ಮಾಡಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಕಟ್ಟಿ ಇಲ್ಲಲೊ ಜಾಣಾ
ಕಟ್ಟಿ ಇಲ್ಲಲೊ ಜಾಣಾ

ಕತೆಗಾರ:
ಊರಾನ ವಡ್ಡರ ಕರಿಸಿ
ಊರಾನ ವಡ್ಡರ ಕರಿಸಿ
ಕಟ್ಟಿ ಕಟ್ಟಿಸಿಕೊಟ್ಟಾ
ಕಟ್ಟಿ ಕಟ್ಟಸಿಕೊಟ್ಟಾ

ಗಂಡ:
ನೊಲಲ್ಯಾಕ ಚೆನ್ನೀ!
ನೂಲಲ್ಯಾಕ ಚಿನ್ನೀ!

ಹೆಂಡತಿ:
ಗೆಳತ್ಯಾರಿಲ್ಲೊ ಜಾಣಾ!
ಗೆಳತ್ಯಾರಿಲ್ಲೊ ಜಾಣಾ!

ಕತೆಗಾರ:
ಓಣ್ಯಾಗಿನವರ ಕರಿಸಿ
ಓಣ್ಯಾಗಿನವರ ಕರಿಸಿ
ಗೆಳತ್ಯಾರ ಕೂಡಿಸಿಕೊಟ್ಟಾ
ಗೆಳತ್ಯಾರ ಕೂಡಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಗುಗ್ಗರಿಲ್ಲೊ ಜಾಣಾ!
ಗುಗ್ಗರಿಲ್ಲೊ ಜಾಣಾ! ,

ಕತೆಗಾರ:
ಗೋದಿ ಕಡ್ಲಿ ತರಿಸಿ
ಗೋದಿ ಕಡ್ಲಿ ತರಿಸಿ
ಗುಗ್ಗರಿ ಹಾಕಿಸಿಕೊಟ್ಟಾ
ಗುಗ್ಗರಿ ಹಾಕಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ಸೀ!

ಹೆಂಡತಿ:
ನನಗ ಬರೂದಿಲ್ಲೋ ಜಾಣಾ!
ನನಗ ಬರೂದಿಲ್ಲೋ ಜಾಣಾ!
****
ಹಾಸ್ಯದ ಹಾಡುಗಳು

ಮದುವೆಯ ಕಾಲದಲ್ಲಿ ಉಪಯೋಗಿಸುವ ಬೀಗರ ಹಾಡುಗಳು ಕೂಡ ಹಾಸ್ಯದವೇ. ಆದರೆ ಅವುಗಳಲ್ಲಿರುವುದು ಅಪಹಾಸ್ಯ. ಈ ವಿಭಾಗದಲ್ಲಿರುವವು ಅಂತಹವಲ್ಲ. ಇವು ನಕ್ಕು ನಗಿಸುವಂತಹವು. ಎರಡನೆಯ ವಿಭಾಗದೊಳಗಿನ ಹಾಡುಗಳಲ್ಲಿಯೂ ಒಂದು ಬಗೆಯ ಹಾಸ್ಯವಿದ್ದದ್ದು ನಿಜ. ಅದರೆ ಅದೂ ಇಂತಹದಲ್ಲ. ಅದಕ್ಕೆ ಸರಸವೆಂದು ಹೇಳಬಹುದು. ಆ ಪರಿಹಾಸ ಅಪಹಾಸಗಳಿಗಿಂತ ಭಿನ್ನವಾದ ಅಟ್ಟಹಾಸವು ಈ ವಿಭಾಗದಲ್ಲಿ ನಿರೂಪಿತವಾಗಿದೆ.

ನೂಲೊಲ್ಲ್ಯಾಕ ಚೆನ್ನಿ

ಈ ಹಾಡಿನ ಭಾವ ಸರಳವಿದೆ.

ಶಬ್ದಪ್ರಯೋಗಗಳು:- ಚಿಲ್ಲ=ಕದರುಹಾಕುವ ಕಿವಿ (ಚರ್ಮದ್ದು). ಹಮ್ಮಿಗಿ=ಚಕ್ರಕ್ಕೆ ಸುತ್ತುವ ದಾರ. ನಡುವಿನ=ಸೊಂಟದಲ್ಲಿರುವ. ಗುಗ್ಗರಿ=ತಿನ್ನುವುದಕ್ಕೆಂದು ಕುದಿಸಿದ ಕಾಳುಗಳು.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...