ನೂಲೊಲ್ಲ್ಯಾಕ ಚೆನ್ನೀ?

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ರಾಟಲಿಲ್ಲೋ ಜಾಣಾ!
ರಾಟಲಿಲ್ಲೋ ಜಾಣಾ!

ಕತೆಗಾರ:
ಮನಿಯಾನ ಬಂಡೀ ಮುರಿಸಿ
ಮನಿಯಾನ ಬಂಡೀ ಮುರಿಸಿ
ರಾಟೀ ಮಾಡಿಸಿ ಕೊಟ್ಟಾ
ರಾಟೀ ಮಾಡಿಸಿ ಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಕದರಿಲ್ಲೊ ಜಾಣಾ!
ಕದರಿಲ್ಲೊ ಜಾಣಾ!

ಕತೆಗಾರ:
ಕೈಯಾನ ಗುದ್ದಲಿ ಮುರಿಸಿ
ಕೈಯಾನ ಗುದ್ದೆಲಿ ಮುರಿಸಿ
ಕದರ ಮಡಿಸಿ ಕೊಟ್ಟಾ
ಕದರ ಮಾಡಿಸಿ ಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಚಿಲ್ಲಿಲ್ಲೊ ಜಾಣಾ!
ಚಿಲ್ಲಿಲ್ಲೊ ಜಾಣಾ!

ಕತೆಗಾರ:
ಮನಿಯಾನ ಕೋಣವು ಕಡಿಸಿ
ಮನಿಯಾನ ಕೋಣವು ಕಡಿಸಿ
ಚಿಲ್ಲು ಮಾಡಿಸಿಕೊಟ್ಟಾ
ಚಿಲ್ಲು ಮಾಡಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಹಮ್ಮಿಗಿಲ್ಲಲೊ ಜಾಣಾ!
ಹಮ್ಮಿಗಿಲ್ಲಲೊ ಜಾಣಾ!

ಕತೆಗಾರ:
ನಡುವಿನ ಉಡದಾರ ಕಡಿದು
ನಡುವಿನ ಉಡದಾರ ಕಡಿದು
ಹಮ್ಮಿಗಿ ಮಾಡಿಸಿಕೊಟ್ಟಾ
ಹಮ್ಮಿಗಿ ಮಾಡಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಕಟ್ಟಿ ಇಲ್ಲಲೊ ಜಾಣಾ
ಕಟ್ಟಿ ಇಲ್ಲಲೊ ಜಾಣಾ

ಕತೆಗಾರ:
ಊರಾನ ವಡ್ಡರ ಕರಿಸಿ
ಊರಾನ ವಡ್ಡರ ಕರಿಸಿ
ಕಟ್ಟಿ ಕಟ್ಟಿಸಿಕೊಟ್ಟಾ
ಕಟ್ಟಿ ಕಟ್ಟಸಿಕೊಟ್ಟಾ

ಗಂಡ:
ನೊಲಲ್ಯಾಕ ಚೆನ್ನೀ!
ನೂಲಲ್ಯಾಕ ಚಿನ್ನೀ!

ಹೆಂಡತಿ:
ಗೆಳತ್ಯಾರಿಲ್ಲೊ ಜಾಣಾ!
ಗೆಳತ್ಯಾರಿಲ್ಲೊ ಜಾಣಾ!

ಕತೆಗಾರ:
ಓಣ್ಯಾಗಿನವರ ಕರಿಸಿ
ಓಣ್ಯಾಗಿನವರ ಕರಿಸಿ
ಗೆಳತ್ಯಾರ ಕೂಡಿಸಿಕೊಟ್ಟಾ
ಗೆಳತ್ಯಾರ ಕೂಡಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಗುಗ್ಗರಿಲ್ಲೊ ಜಾಣಾ!
ಗುಗ್ಗರಿಲ್ಲೊ ಜಾಣಾ! ,

ಕತೆಗಾರ:
ಗೋದಿ ಕಡ್ಲಿ ತರಿಸಿ
ಗೋದಿ ಕಡ್ಲಿ ತರಿಸಿ
ಗುಗ್ಗರಿ ಹಾಕಿಸಿಕೊಟ್ಟಾ
ಗುಗ್ಗರಿ ಹಾಕಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ಸೀ!

ಹೆಂಡತಿ:
ನನಗ ಬರೂದಿಲ್ಲೋ ಜಾಣಾ!
ನನಗ ಬರೂದಿಲ್ಲೋ ಜಾಣಾ!
****
ಹಾಸ್ಯದ ಹಾಡುಗಳು

ಮದುವೆಯ ಕಾಲದಲ್ಲಿ ಉಪಯೋಗಿಸುವ ಬೀಗರ ಹಾಡುಗಳು ಕೂಡ ಹಾಸ್ಯದವೇ. ಆದರೆ ಅವುಗಳಲ್ಲಿರುವುದು ಅಪಹಾಸ್ಯ. ಈ ವಿಭಾಗದಲ್ಲಿರುವವು ಅಂತಹವಲ್ಲ. ಇವು ನಕ್ಕು ನಗಿಸುವಂತಹವು. ಎರಡನೆಯ ವಿಭಾಗದೊಳಗಿನ ಹಾಡುಗಳಲ್ಲಿಯೂ ಒಂದು ಬಗೆಯ ಹಾಸ್ಯವಿದ್ದದ್ದು ನಿಜ. ಅದರೆ ಅದೂ ಇಂತಹದಲ್ಲ. ಅದಕ್ಕೆ ಸರಸವೆಂದು ಹೇಳಬಹುದು. ಆ ಪರಿಹಾಸ ಅಪಹಾಸಗಳಿಗಿಂತ ಭಿನ್ನವಾದ ಅಟ್ಟಹಾಸವು ಈ ವಿಭಾಗದಲ್ಲಿ ನಿರೂಪಿತವಾಗಿದೆ.

ನೂಲೊಲ್ಲ್ಯಾಕ ಚೆನ್ನಿ

ಈ ಹಾಡಿನ ಭಾವ ಸರಳವಿದೆ.

ಶಬ್ದಪ್ರಯೋಗಗಳು:- ಚಿಲ್ಲ=ಕದರುಹಾಕುವ ಕಿವಿ (ಚರ್ಮದ್ದು). ಹಮ್ಮಿಗಿ=ಚಕ್ರಕ್ಕೆ ಸುತ್ತುವ ದಾರ. ನಡುವಿನ=ಸೊಂಟದಲ್ಲಿರುವ. ಗುಗ್ಗರಿ=ತಿನ್ನುವುದಕ್ಕೆಂದು ಕುದಿಸಿದ ಕಾಳುಗಳು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಪಕಾರಿ ಬ್ಯಾಕ್ಟರಿಯಾಗಳು (ಸೂಕ್ಷ್ಮಜೀವಿಗಳು)
Next post ಒಂದಿರುಳು

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…