Home / ಕವನ / ಕವಿತೆ / ನೂಲೊಲ್ಲ್ಯಾಕ ಚೆನ್ನೀ?

ನೂಲೊಲ್ಲ್ಯಾಕ ಚೆನ್ನೀ?

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ರಾಟಲಿಲ್ಲೋ ಜಾಣಾ!
ರಾಟಲಿಲ್ಲೋ ಜಾಣಾ!

ಕತೆಗಾರ:
ಮನಿಯಾನ ಬಂಡೀ ಮುರಿಸಿ
ಮನಿಯಾನ ಬಂಡೀ ಮುರಿಸಿ
ರಾಟೀ ಮಾಡಿಸಿ ಕೊಟ್ಟಾ
ರಾಟೀ ಮಾಡಿಸಿ ಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಕದರಿಲ್ಲೊ ಜಾಣಾ!
ಕದರಿಲ್ಲೊ ಜಾಣಾ!

ಕತೆಗಾರ:
ಕೈಯಾನ ಗುದ್ದಲಿ ಮುರಿಸಿ
ಕೈಯಾನ ಗುದ್ದೆಲಿ ಮುರಿಸಿ
ಕದರ ಮಡಿಸಿ ಕೊಟ್ಟಾ
ಕದರ ಮಾಡಿಸಿ ಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಚಿಲ್ಲಿಲ್ಲೊ ಜಾಣಾ!
ಚಿಲ್ಲಿಲ್ಲೊ ಜಾಣಾ!

ಕತೆಗಾರ:
ಮನಿಯಾನ ಕೋಣವು ಕಡಿಸಿ
ಮನಿಯಾನ ಕೋಣವು ಕಡಿಸಿ
ಚಿಲ್ಲು ಮಾಡಿಸಿಕೊಟ್ಟಾ
ಚಿಲ್ಲು ಮಾಡಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಹಮ್ಮಿಗಿಲ್ಲಲೊ ಜಾಣಾ!
ಹಮ್ಮಿಗಿಲ್ಲಲೊ ಜಾಣಾ!

ಕತೆಗಾರ:
ನಡುವಿನ ಉಡದಾರ ಕಡಿದು
ನಡುವಿನ ಉಡದಾರ ಕಡಿದು
ಹಮ್ಮಿಗಿ ಮಾಡಿಸಿಕೊಟ್ಟಾ
ಹಮ್ಮಿಗಿ ಮಾಡಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಕಟ್ಟಿ ಇಲ್ಲಲೊ ಜಾಣಾ
ಕಟ್ಟಿ ಇಲ್ಲಲೊ ಜಾಣಾ

ಕತೆಗಾರ:
ಊರಾನ ವಡ್ಡರ ಕರಿಸಿ
ಊರಾನ ವಡ್ಡರ ಕರಿಸಿ
ಕಟ್ಟಿ ಕಟ್ಟಿಸಿಕೊಟ್ಟಾ
ಕಟ್ಟಿ ಕಟ್ಟಸಿಕೊಟ್ಟಾ

ಗಂಡ:
ನೊಲಲ್ಯಾಕ ಚೆನ್ನೀ!
ನೂಲಲ್ಯಾಕ ಚಿನ್ನೀ!

ಹೆಂಡತಿ:
ಗೆಳತ್ಯಾರಿಲ್ಲೊ ಜಾಣಾ!
ಗೆಳತ್ಯಾರಿಲ್ಲೊ ಜಾಣಾ!

ಕತೆಗಾರ:
ಓಣ್ಯಾಗಿನವರ ಕರಿಸಿ
ಓಣ್ಯಾಗಿನವರ ಕರಿಸಿ
ಗೆಳತ್ಯಾರ ಕೂಡಿಸಿಕೊಟ್ಟಾ
ಗೆಳತ್ಯಾರ ಕೂಡಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ನೀ!

ಹೆಂಡತಿ:
ಗುಗ್ಗರಿಲ್ಲೊ ಜಾಣಾ!
ಗುಗ್ಗರಿಲ್ಲೊ ಜಾಣಾ! ,

ಕತೆಗಾರ:
ಗೋದಿ ಕಡ್ಲಿ ತರಿಸಿ
ಗೋದಿ ಕಡ್ಲಿ ತರಿಸಿ
ಗುಗ್ಗರಿ ಹಾಕಿಸಿಕೊಟ್ಟಾ
ಗುಗ್ಗರಿ ಹಾಕಿಸಿಕೊಟ್ಟಾ

ಗಂಡ:
ನೂಲಲ್ಯಾಕ ಚೆನ್ನೀ!
ನೂಲಲ್ಯಾಕ ಚೆನ್ಸೀ!

ಹೆಂಡತಿ:
ನನಗ ಬರೂದಿಲ್ಲೋ ಜಾಣಾ!
ನನಗ ಬರೂದಿಲ್ಲೋ ಜಾಣಾ!
****
ಹಾಸ್ಯದ ಹಾಡುಗಳು

ಮದುವೆಯ ಕಾಲದಲ್ಲಿ ಉಪಯೋಗಿಸುವ ಬೀಗರ ಹಾಡುಗಳು ಕೂಡ ಹಾಸ್ಯದವೇ. ಆದರೆ ಅವುಗಳಲ್ಲಿರುವುದು ಅಪಹಾಸ್ಯ. ಈ ವಿಭಾಗದಲ್ಲಿರುವವು ಅಂತಹವಲ್ಲ. ಇವು ನಕ್ಕು ನಗಿಸುವಂತಹವು. ಎರಡನೆಯ ವಿಭಾಗದೊಳಗಿನ ಹಾಡುಗಳಲ್ಲಿಯೂ ಒಂದು ಬಗೆಯ ಹಾಸ್ಯವಿದ್ದದ್ದು ನಿಜ. ಅದರೆ ಅದೂ ಇಂತಹದಲ್ಲ. ಅದಕ್ಕೆ ಸರಸವೆಂದು ಹೇಳಬಹುದು. ಆ ಪರಿಹಾಸ ಅಪಹಾಸಗಳಿಗಿಂತ ಭಿನ್ನವಾದ ಅಟ್ಟಹಾಸವು ಈ ವಿಭಾಗದಲ್ಲಿ ನಿರೂಪಿತವಾಗಿದೆ.

ನೂಲೊಲ್ಲ್ಯಾಕ ಚೆನ್ನಿ

ಈ ಹಾಡಿನ ಭಾವ ಸರಳವಿದೆ.

ಶಬ್ದಪ್ರಯೋಗಗಳು:- ಚಿಲ್ಲ=ಕದರುಹಾಕುವ ಕಿವಿ (ಚರ್ಮದ್ದು). ಹಮ್ಮಿಗಿ=ಚಕ್ರಕ್ಕೆ ಸುತ್ತುವ ದಾರ. ನಡುವಿನ=ಸೊಂಟದಲ್ಲಿರುವ. ಗುಗ್ಗರಿ=ತಿನ್ನುವುದಕ್ಕೆಂದು ಕುದಿಸಿದ ಕಾಳುಗಳು.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...