Home / ಕವನ / ಕವಿತೆ / ಜೀನನ ಹಾಡು

ಜೀನನ ಹಾಡು

ಇಂದಽ ಎಳ್ಳಾಮಾಸಿ ಬಂತಲ್ಲ ಜೀನಾ||
ಅದ್ದಽನ ಬೀಸಽ ಗಿದ್ದಽನ ಕುಟ್ಟ|
ಕುಳ್ಳ್ಯಾಗ ಅಡುವ ಕೋಲೀಲೆ ಮುಗಚ||
ಎಲ್ಲಾರ ಛೆರಗಾ ಹೊಂಟಿತಲ್ಲೊ ಜೀನಾ|
ನಮ್ಮ ದ್ಯಾವರ ಛೆರಗಾ ಹೊಂಡಬೇಕೊ ಜೀನಾ||

ಅವರೆಲ್ಲಾ ಹಿಂದಽ ನಾವೆಲ್ಲಾ ಹಿಂದಽ||
ಅಂಟಽದ ತೆಳೆಗ ಇಟ್ಟಾನೊ ಜೀನಾ|
ಅಂಟಽಕ ತೆಲಿಕೊಟ್ಟು ಮಲಗ್ಯಾನೊ ಜೀನಾ||

ಮುಕ್ಕ ಮಗಿ ನೀರಾ ಕಾಗಿ ಕುಡಿತಲ್ಲ|
ಕುಳ್ಳ್ಯಾಗಿನ ನುಚ್ಚ ಹದ್ದ ಒಯಿತಲ್ಲ|
ಇನ್ನ್ಯಾನ ಉಳ್ಳೇ ಇನ್ನ್ಯಾನ ತಿಲ್ಲೇ||
* * *

ಉದ ಉದ ಅಂತ ಹೋಗಿ ನಿಂತಾ`ಳೆಲ್ಲ’|
ಉದ ಉದ ಅಂದರ ನೀಡಾಽಣಿಲ್ಲ||

ಓಡ್ಯಾಡಿ ಪುಂಡಿ ಕಟಿಗಿ ಕಿತ್ತ್ಯಾನೊ ಜೀನಾ|
ಎಲ್ಲವನ ಬೆನ್ನ ಬೆನ್ನ ಶಳದಾನೊ ಜೀನಾ||

ಹೊಡಿಬ್ಯಾಡೊ ಜೀನಾ ಹೊಡಿಬ್ಯಾಡೊ ಜೀನಾ|
ಬಂದ ಹಾದೀ ಕೂಡಿ ಹೋಗತೇನೊ ಜೀನಾ||

ಜ್ವಾಳಽದ ಹೊಲಕ ಹೋಗ್ಯಾಳ ಎಲ್ಲ|
ಕಣ್ಣಾನ ಕಾಡೀಗಿ ಉದರ್‍ಸ್ಯಾಳೆಲ್ಲ||

ಹತ್ತಿಯ ಹೊಲಕ ಹೋದಾಳೆಲ್ಲಾ|
ಕೈಮ್ಯಾಲಿನ ಗಂಧಾ ಉದರ್‍ಸ್ಯಾಳೆಲ್ಲಾ||

ಗೋದೀಯ ಹೊಲಕ ಹೋದಾಳೆಲ್ಲಾ|
ಉಡಿಯಾನ ಭಂಡಾರ ಉದರ್‍ಸ್ಯಾಳೆಲ್ಲಾ||

ಕಡ್ಲೀಯ ಹೊಲಕ ಹೋದಾಳೆಲ್ಲಾ|
ಹಣಿಮ್ಯಾಲಿನ ಕೂಕಮ್ಮ ಉದರ್‍ಸ್ಯಾಳೆಲ್ಲಾ||
* * *

ಜ್ವಾಳಽದ ಹೊಲಕ ಹ್ವಾದಾಽನೊ ಜೀನಾ|
ಹತ್ತ್‌ ಖಂಡಗ ಜ್ವಾಳೆಲ್ಲಾ ಬತ್ತಗಾಡೀಗಿ||

ಹತ್ತೀಯ ಹೊಲಕ ಹ್ವಾದಾಽನೊ ಜೀನಾ|
ಹತ್ತ್‌ ಖಂಡಗ ಹತ್ತೆಲ್ಲಾ ಬಂಜಿಯಾಯೀತಲ್ಲಾ||

ಗೋದೀಯ ಹೊಲಕ ಹ್ವಾದಾಽನೊ ಜೀನಾ|
ಹೆತ್‌ತ ಖಂಡ್ಗ ಗೋದೆಲ್ಲಾ ಜೊಳ್ಳಹಾಯಿತಲ್ಲ||

ಕಡ್ಲೀಯ ಹೊಲಕ ಹ್ವಾದಾಽನೊ ಜೀನಾ|
ಹೆತ್ತ್‌ ಖಂಡೆಗ್ಕಡ್ಲೆಲ್ಲಾ ಕೊಳ್ಳಿಹಾಯಿತಲ್ಲ||
* * *

ಕಂಬ್ಳೀಯ ಮುಸಕಾ ಹೊಡೆದಾನೊ ಜೀನಾ|
ಜಗಲೀಗಿ ತಲಿಕೊಟ್ಟು ಮಲಗ್ಯಾನೊ ಜೀನಾ||

ಉಣ್ಣೇಳೊ ಜೀನಾ ತಿನ್ನೇಳೊ ಜೀನಾ|
ಇನ್ನೇನ ಉಳ್ಳೇ ಇನ್ನೇನ ತಿಲ್ಲೆ||

ಹೆತ್ತ್ ಖಂಡಗ ಜ್ವಾಳೆಲ್ಲಾ ಬತ್ತ್‌ ಗಾಡೀಗೆ|
ಹೆತ್ತ್‌ ಖಂಡಗ ಹತ್ತೆಲ್ಲಾ ಬಂಜಿಯಾಯೀತಲ್ಲ||

ಹೆತ್ತ್‌ ಖಂಡಗ ಗೋದೆಲ್ಲಾ ಸೊಳ್ಳೆ ಹಾಯಿತಲ್ಲ|
ಹತ್ತ್‌ ಖಂಡಗ ಕಡ್ಲೆಲ್ಲಾ ಕೊಳ್ಳಿಹಾಯ್ತಲ್ಲ||
****
ಜೀನನ ಹಾಡು

ಇದೊಂದು ಯಕ್ಷಿಣಿಯ ಕಥೆ. ಜೀನನೊಬ್ಬನು ನೈವೇದ್ಯದ ಸಲುವಾಗಿ ತೀರ ತುಸು ಅಡಿಗೆಯನ್ನು ಮಾಡಿಸಿಕೊಂಡು ಎಳ್ಳಾಮಾಸೀ ದಿನ ಹೊಲಕ್ಕೆ ಹೋದನು. ಆ ಇದ್ದಷ್ಟು ಅಡಿಗೆಯನ್ನು ಗುಬ್ಬಿಕಾಗೆಗಳು ತಿಂದುಬಿಡುವವು. ಮೋರೆ ಒಣಗಿಸಿಕೊಂಡು ಕುಳಿತಿರುವ ಜೀನನ ಮುಂದೆ ಒಬ್ಬ ಯಕ್ಷಿಣಿಯು ಬಂದು `ನನ್ನ ನೈವೇದ್ಯವನ್ನು ನನಗೆ ಕೊಡು’ ಎಂದು ಕೇಳುವಳು. ಹೆಸಿದು ಹೊಟ್ಟೆ ಉರಿಯುತ್ತಿರುವ ಜೀನನು ಹಸಿದಂಟುಗಳಿಂದ ಅವಳನ್ನು
ಚೆನ್ನಾಗಿ ಥಳಿಸಿದನು. ಅವಳು ತನ್ನ ಮಂಗಲದ್ರವ್ಯ (ಅರಿಸಿಣ, ಕುಂಕುಮ್ಮ, ಕಾಡಿಗೆ, ಗಂಧ)ಗಳನ್ನು ಮಂತ್ರಿಸಿ ಅವನ ಬೆಳೆಗಳ ಮೇಲೆ ತೂರುವಳು. ಅದರಿಂದ ಆ ಬೆಳೆಗಳಿಗೆಲ್ಲ ಬಗೆಬಗೆಯ ರೋಗಗಳುಂಟಾಗಿ ಅವೆಲ್ಲವೂ ಕೆಟ್ಟುಹೋಗುತ್ತವೆ.

ಛಂದಸ್ಸು:- ಮಂದಾನಿಲ ರಗಳೆಗೆ ಸಮೀಪವಾಗಿದೆ.

ಶಬ್ದಪ್ರಯೋಗಗಳು:- ಅದ್ನಗಿದ್ನ=ಅರ್ಧ ಸೇರು, ಗಿರ್ಧ ಸೇರು. ಕುಳ್ಯಾಗ=ಚಿಕ್ಕ ಮಡಿಕೆಯಲ್ಲಿ. ಛರಗ=ಅಡವಿಯ ನೈವೇದ್ಯ. ಅಂಟ-ಮಂಚಿಕೆ. ಎಲ್ಲ=ಎಲ್ಲಮ್ಮ(ದೇವತೆ). ಬತ್ತಗಾಡಿಗೆ=ಜೋಳದ ತೆನೆಗಳಿಗೆ ಬೀಳುವ ಕಾಡಿಗೆರೋಗ. ಬಂಜಿ=ಹತ್ತಿಯ ಕಾಯಿಗಳಿಗೆ ಬೀಳುವ ರೋಗ. ಸೊಳ್ಳು ಹಾಯಿ=ಗೋದಿಯ ಬೆಳೆಯ ಮೇಲೆ ಇಟ್ಟಂಗಿಯಂತಹ ರೋಗ ಬೀಳುವುದರಿಂದ ಬೆಳೆಯೆಲ್ಲ ಸೊಳ್ಳಾಗುತ್ತದೆ. ಕೊಳ್ಳಿ=ಕಡಲೆಯಗಿಡೆಗಳನ್ನು ಒಣಗಿಸುವ ಕೆಂಪು ರೋಗ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...