Home / ಲೇಖನ / ಇತರೆ / ಸುಖಕ್ಕೆ ಅಪೇಕ್ಷೆ ಪಡಬೇಡಿ

ಸುಖಕ್ಕೆ ಅಪೇಕ್ಷೆ ಪಡಬೇಡಿ

ಪ್ರತಿಯೊಬ್ಬರು ಬಾಳಿನಲ್ಲಿ ಸುಖವಾಗಿ ಬಾಳಬೇಕೆನ್ನುತ್ತಾರೆ. ಇದು ಮಾನವನ ಸಹಜ ಪ್ರವೃತ್ತಿ. ‘ಸುಖ’ ಎನ್ನುವ ಪದವೇ ಸದಾ ನಮಗೆ ಜೀವನದ ಹೊಯ್ದಾಟಗಳಿಗೆ ಕಾರಣವಾಗುತ್ತದೆ. ಈಗ ಪ್ರತಿಯೊಬ್ಬರಿಗೂ ಕೇಳಿದರೂ ಸುಖದ ಅರ್ಥ ಬೇರೆ ಬೇರೆಯಾಗಿ ಅರ್ಥೈಸುತ್ತಾರೆ. ಆರೋಗ್ಯವಾಗಿರುವುದೇ ಸುಖವೆಂದು ಕೆಲವರೆಂದರೆ, ಹಣ ಗಳಿಕೆ ಮಾಡಿ ಚಿಂತೆಯಿಂದ ದಿನನಿತ್ಯ ಬದುಕುವುದೇ ಸುಖ ಎನ್ನುತ್ತಾರೆ ಹಲವರು. ಮಕ್ಕಳು ಜ್ಞಾನಾರ್ಜನೆ ಮಾಡಿಕೊಂಡು ನೌಕರಿ ಮಾಡಿಕೊಂಡು ನೆಮ್ಮದಿಯಿಂದ ಇದ್ದರಾಯಿತು ಅದೇ ಸುಖ ಎನ್ನುತ್ತಾರೆ. ಹೀಗೆ ಸುಖದ ಅರ್ಥಗಳು ಕಾಲ ಕಾಲಕ್ಕೂ ಬದಲಾಗುತ್ತ ಸಾಗುತ್ತವೆ.

ಹಾಗಾದರೆ ಸುಖ ಯಾವುದು! ಸಿರಿವಂತರಾಗಿದ್ದರೆ ಅಥವಾ ಆರೋಗ್ಯದಿಂದ ಬಾಳಿದರೆ ಅಥವಾ ಮಕ್ಕಳು ಮೊಮ್ಮಕ್ಕಳ ನಡುವೆ ನಗುತ್ತ ಬಾಳುವುದೇ ಹಾಗಾಗದಿದ್ದರೆ ಒಂದು ದೊಡ್ಡ ಬಂಗ್ಲೆ ಕಟ್ಟಿಕೊಂಡು, ಕಾರು ಖರೀದಿಸಿ ಇನ್ನೇನೋ ಆಸೆಗಳಿಗೆ ತೃಪ್ತಿಪಡಿಸಿ ಬಾಳುವುದು ಸುಖವೇ! ಎಲ್ಲಕ್ಕು ಉತ್ತರ ‘ಇಲ್ಲ’ ಎಂಬುದೇ ತಿಳಿಯುತ್ತದೆ.

ಗೌತಮ ಬುದ್ಧರು ‘ಆಸೆಯೆ ದುಃಖಕ್ಕೆ ಕಾರಣ’ ಎಂದರು. ಅಂದರೆ ದಿನನಿತ್ಯ ಸಾವಿರಾರು ಆಸೆಗಳು ನಮ್ಮ ಕಲ್ಪನೆಯಲ್ಲಿ ಹುಟ್ಟುತ್ತವೆ. ಅಂಥ ಹುಟ್ಟಿಕೊಂಡ ಆಸೆಗಳಿಗೆ ಕಟ್ಟಿಕೊಡುತ್ತ ಸಾಗಿದರೆ ನಾವೆಂದೂ ಸುಖಿಗಳಾಗುವುದಿಲ್ಲ. ‘ಎಲ್ಲರ ಮನೆಯ ದೋಸೆ ತೂತು’ ಎಂಬಂತೆ ಎಲ್ಲರೂ ಒಂದಿಲ್ಲ ಒಂದು ತೊಂದರೆಗಳಿಗೆ ಸಿಲುಕಿ ಸುಖದಿಂದ ವಂಚಿತರಾಗಿದ್ದಾರೆ. ಈ ಲೋಕದಲ್ಲಿ ಬಾಳುವ ಯಾರೂ ಸುಖಿಗಳಲ್ಲ. ರಾಜ ಮಹಾರಾಜರಿಂದ ಜನಸಾಮಾನ್ಯನವರೆಗೂ ಏನೋ ಅತೃಪ್ತಿಗಳು ಕಾಡುತ್ತಿವೆ.

ಆ ಅತೃಪ್ತಿಗಳೇ ಸುಖದ ವೈರಿಗಳಾಗಿ ನಮ್ಮನ್ನು ನಿತ್ಯ ಶೋಕದ ಪ್ರಪಾತಕ್ಕೆ ತಳ್ಳುತ್ತಿವೆ. ಸುಖವೆಂಬುದೊಂದು ಮರಿಚೀಕೆಯಾಗಿದೆ. ನಾವು ಅದನ್ನು ಹಿಡಿಯಲು ಓಡುತ್ತಿರುವಾಗಲೆ ಅದೂ ನಮಗೆ ನಿಲುಕದೇ ಹಾಗೇ ದೂರ ಓಡುತ್ತದೆ. ಅಂತಲೇ ಅರಿಸ್ಟಾಟಲ್ ‘ಸುಖದ ಪ್ರಾಪ್ತಿಗೆ ವಸ್ತುಗಳು ಸಂಗ್ರಹಿಸಿದಷ್ಟು ದುಃಖವು ಅಧಿಕವಾಗುತ್ತದೆ’ ಎಂದರು.

ಆದ್ದರಿಂದ ಸಂತರು, ಶರಣರು ನೀನು ಸುಖಕ್ಕೆ ಅಪೇಕ್ಷೆ ಪಡದೇ ಜೀವನದಲ್ಲಿ ಬಂದುದೆಲ್ಲಕ್ಕೂ ನೆಮ್ಮದಿಯಿಂದ ಸ್ವೀಕರಿಸಿದರೆ ಅದೇ ಸುಖವೆಂದು ಅರಹುತ್ತಾರೆ. ಅದೇ ಸಾರ್ಥಕ ಮೈಲಿಗಲ್ಲಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...