Home / ಕವನ / ತತ್ವಪದ / ಹಿಂಸೆ ಏಕೆ!

ಹಿಂಸೆ ಏಕೆ!

ನಿನ್ನ ಮನವು ಮೃದುವಿನಂತೆ ಕಠಿಣವೊ!
ಹಾಗೆಂದು ನಿನ್ನಲ್ಲಿ ಪ್ರಶ್ನೆ ಹಾಕಲೆ
ಹೌದು ಸಕಲ ಜೀವಿಂಗಳಲಿ ದಯೆ ನಿಡಿ
ಮರು ಕ್ಷಣವೆ ಪ್ರಾಣಿಗಳಿಗೆ ಕೀಟಲೆ

ಜೀವನ ನಿದ್ರಾ ಭಯ, ಕಾಮ
ಸಕಲ ಜೀವಿಂಗಳ ಇಂಗಿತವದು
ನಿಷ್ಟಾಪದಿ ನಿನಾ ಆಹಾರ ಕದ್ದರೆ
ವೈಚಾರಿಕ ನೀನಗಿಯೂ ಕೊಲ್ಲುವುದು

ಮನುಜ ದಯತೋರದಿರ್‍ದಡೆ
ಪ್ರಾಣಿಗಳ ಅವಸಾನ ನಿಶ್ಚಿತವು
ಎಲ್ಲವೂ ನಷ್ಟಿಸಿ ನೀನೆ ಬಾಳಬೇಕೆಂಬ
ತಿಳಿಯದೇ! ನಿನ್ನ ಬದುಕು ಅಶ್ಚಿತವು

ವೇದಾಂತ ಮಾತುಗಳ ಹೇಳಿದರಾಗದು
ನಿನ್ನ ಹೆಜ್ಜೆ ಹೆಜ್ಜೆಗಳಲೆ ಅವು ಕಾಣಬೇಕು
ನಡೆಯುವಾಗ ನಿಂತಾಗ ಕುಳಿತಾಗ
ಪ್ರಾಣಿಗಳ ಹಿಂಸಿಸದಂತೆ ಎಚ್ಚರಬೇಕು

ನಿನ್ನ ಒಂದೊಂದು ಕರ್‍ಮಗಳೆಲ್ಲ
ದೇವನ ಪುಸ್ತಕದಲಿ ಪ್ರಕಟವಾಗಿದವು
ಶುದ್ಧ ಕರ್‍ಮ ಶುದ್ಧ ಜೀವನ ಮಾತ್ರ
ಮಾಣಿಕ್ಯ ವಿಠಲನ ನೆನದವು
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ