ವಿಪರ್‍ಯಾಸ

‘ಕನ್ನಡ ನಾಡಿಗೆ ಕನ್ನಡವೇ ಗತಿ’
ಎಂದರು ಆಗದ ಬಿ.ಎಂ.ಶ್ರೀ
ಕನ್ನಡಕ್ಕೆ ಕರ್ನಾಟಕದಲೆ ತಿಥಿ
ಎನ್ನುವನೀಗ ಕಾ.ವೆಂ.ಶ್ರೀ!
ಶತಶತಮಾನದ ಇತಿಹಾಸದಲಿ
ಅರಳುತ ಬಂದಿಹ ತಾಯಿನುಡಿ
ಬೆಳಕನು ಬಿತ್ತಿಹ ಕವಿ‌ಋಷಿ ಕಲಿಗಳ
ವಿಶ್ವಕೆ ತಂದಿಹ ನಮ್ಮ ನುಡಿ
ಮರೆಯಾಗುತಿದೆ ನಮ್ಮೆದುರು
ಕಣ್ಮುಚ್ಚಿದ ಈ ಕಣ್ಣೆದುರು!
ಆದರೂ ನಡೆದಿದೆ ಗತವೈಭವ ಕಥೆ
ಎನಿತೋ ವಿಚಾರ ಗೋಷ್ಠಿಯಲಿ
ಬೀದಿಗೆ ಇಳಿಯದ ಮಣ್ಣನು ಮುಟ್ಟದ
ನಿರಭಿಮಾನಿಗಳ ಕೂಟದಲಿ
ವಿಮರ್ಶಾತ್ಮಕ ನೆಲೆಯಲ್ಲಿ
ಬುದ್ಧಿ ಪ್ರದರ್ಶನ ವೇಶದಲಿ!
ಕನ್ನಡ ಧ್ವಜ ಮೇಲೆತ್ತುವ ಕೈಗಳು
ಕಂಡರೂ ಹಲವೆಡೆ ನಾಲ್ಕಾರು
ಕನ್ನಡ ಮರೆಯುತ ಬೀಗುತ ನಡೆಯುವ
ಕಾಲ್ಗಳೆ ಕಂಡಿವೆ ನೂರಾರು
ಕನ್ನಡ ಮಿನುಗುವ ಗಗನದಲಿ
ಅನ್ಯತೆ ಹಬ್ಬಿಹ ಮಬ್ಬಿನಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹತ್ಯೆ
Next post ಸುಮ್ಮನೇಕೆನ್ನನೆಲೆ ವಿಧಿಯೆ ಕಾಡಿಸುವೆ?

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…