ಎದೆಯ ಬಡಿತ

‘ಲಬ್‌ಡಬ್ ಲಬ್‌ಡಬ್’ ಎನ್ನದೆ ಹೋದರು
ನನ್ನಯ ಈ ಹೃದಯ
ಕನ್ನಡ ಕನ್ನಡ ಎನ್ನತಲಿರುವುದು
ಕೇಳೋ ಓ ಗೆಳೆಯ
ಎದೆ ಸೀಳಿದರೂ ಅಕ್ಷರ ನಾಲ್ಕು
ನನ್ನಲಿ ಇಲ್ವಂತೆ
ಆದರೆ ಏನು? ಮೂರಕ್ಷರದ
ಕನ್ನಡ ಇಹುದಂತೆ!
ನನ್ನಯ ರಕ್ತದಿ ಹೀಮೊಗ್ಲೋಬಿನ್
ಕೊರತೆಯು ಉಂಟಂತೆ
ಆದರೆ ಏನು? ಕನ್ನಡ ಶಕ್ತಿ
ಅಂಶವು ಹೆಚ್ಚಂತೆ!
ರುಚಿಯನು ಅರಿಯದು ನನ್ನೀ ನಾಲಗೆ
ಕಾರಣ ಜ್ವರವಂತೆ
ಕರ್ನಾಟಕದ ಕಾವೇರೀ ಜಲ
ಇದಕೆ ಹೊರತಂತೆ!
ಜೀವನ ಪೂರ ಈ ಜಗವನ್ನೇ
ನಾ ಸುತ್ತುವೆನಂತೆ
ಆದರೆ ಕಡೆಗೆ ಪುಣ್ಯದ ಮರಣ
ತಾಯ್ನೆಲದಲಿ ಅಚಿತೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಾಳಾಸಾಬಿಯೂ ಕುರುಡಿಹಳ್ಳಿಯೂ…..

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…