ಎದೆ ತುಂಬಿದ ಹಾಡು

ಕನ್ನಡ ನಾಡು ಸುವರ್ಣ ಬೀಡು
ಮುತ್ತು ಹರಿವ ಜಾಡು
ಕನ್ನಡ ನಾಡಿನ ಚೆಲುವಿಗೆ ಒಲಿದು
ಹಾಡುವೆ ನಾ ಹಾಡು – ಎದೆ
ತುಂಬಿ ಬಂದ ಹಾಡು
ಬೇಲೂರಿನ ಶಿಲೆ ಶಿಲ್ಪಿಗಳಾ ಕಲೆ
ಸಮ್ಮೋಹನವಾಗಿ
ಮಲೆನಾಡಿನ ಸಿರಿ ಜಲಪಾತದ ಝರಿ
ಸಂಕೀರ್ತನವಾಗಿ
ಹಾಡಿದೆ ಜುಳುಜುಳು ಮಂಜುಳ ಗೀತೆಯ
ಸ್ಫೂರ್ತಿಯ ಸೆಲೆಯಾಗಿ
ಕರುನಾಡಿನ ಈ ಕಣ ಕಣವನ್ನು
ಮಾಡಿದೆ ಕಿವಿಯಾಗಿ
ಕಾವೇರಿಯ ಹೊಳೆ ನೀಡುತ ಹೊಂಬೆಳೆ
ಎಲ್ಲರ ಉಸಿರಾಗಿ
ಸಹ್ಯಾದ್ರಿಯ ಮಲೆ ಗೊಮ್ಮಟನಾ ಶಿಲೆ
ನಮಗಾಶ್ರಯವಾಗಿ
ಉಳಿಸಿದೆ ಬೆಳೆಸಿದೆ ಕನ್ನಡ ಸತ್ವವ
ಚಿರನೂತನವಾಗಿ
ದಿಕ್ಕು ದಿಕ್ಕುಗು ಕನ್ನಡ ತೇರನು
ಹರಿಸಿದೆ ಜತೆಯಾಗಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವರ ನಾಡಿನಲಿ

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…