ಕನ್ನಡ ಉಳಿಸೇಳಿ

ಎದ್ದೇಳಿ ಎದ್ದೇಳಿ ಎದ್ದೇಳಿ ಎಲ್ಲ
ಕನ್ನಡದ ತನವಿರುವ ಕನ್ನಡಿಗರೆಲ್ಲ
ಬೆಳಗಾವಿ ನಮ್ಮಿಂದ ಸರಿಯುವ ಮುನ್ನ
ಬೆಂಗ್ಳೂರು ದೆಹಲಿಯ ವಶವಾಗೊ ಮುನ್ನ
ಕನ್ನಡವೆ ಮರೆಯಾಗಿ ಹೋಗುವ ಮುನ್ನ
ಎದ್ದೇಳಿ ಕನ್ನಡಿಗರೇ ತೆರೆದು ಕಣ್ಣ
ಕಾವೇರಿ ಕರುನಾಡ ತೊರೆಯುವ ಮುನ್ನ
ಅನ್ಯಾಯ ಸಂಪೂರ್ಣ ಆಗುವ ಮುನ್ನ
ಶಕ್ತಿಹೀನರು ನಾವು ಎಂದೆನಿಸೊ ಮುನ್ನ
ಎದ್ದೇಳಿ ಅಳಿಸುತ್ತ ನಮ್ಮೊಳಗಿನ ಖಿನ್ನ
ಕರುನಾಡು ತಾಯ್ನೆಲವೆ ನಮ್ಮುಳಿವು ಎಂದು…
ನುಡಿವಂತ ತಾಯ್ನುಡಿಯೆ ನಮ್ಮುಸಿರು ಎಂದು…
ಜಲಧಾರೆ ಕಾವೇರಿ ನಮ್ಮ ಸಿರಿ ಎಂದು…
ಎಚ್ಚೆತ್ತು ಎದ್ದೇಳಿ ಕನ್ನಡ ಉಳಿಸೇಳಿ
ಅಭಿಮಾನದ ಕಿಚ್ಚ ಹಚ್ಚುತ್ತ ಏಳಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನ್ಯಾಯದ ದಾರಿ ದೂರ
Next post ಈ ಜನುಮವೆ ಮುಗಿವ ಮುನ್ನ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…