ನಿಂತ ನೆಲದಲ್ಲಿ

ಕಣ್ಣೆದುರೇ ಕಣ್ ಮರೆಯಾಗುತಿದೆ
ಮಾತು ಕಲಿಸಿದ ಕನ್ನಡವು
ನಿಂತ ನೆಲವು ಪರದೇಶಿಯಾಗುತಿದೆ
ಜನ್ಮ ಕೊಟ್ಟು ಕರ್ನಾಟಕವು || ಪಲ್ಲವಿ ||
ಇಲ್ಲೆ ಹುಟ್ಟಿ ನದಿಯಾಗಿ ಹರಿದ ನಮ
ಕಾವೇರಮ್ಮ ಮುನಿದಿಹಳು
ಕನ್ನಡಿಗರ ಅಭಿಮಾನ ಶೂನ್ಯಕೆ
ಅನ್ಯರ ಮನೆಯನು ಸೇರಿಹಳು
ಕನ್ನಡತಿಯ ಬೆಳಗಾವಿ ಭುಜವನು
ಮರಾಠಿಯರು ಹಿಡಿದೆಳೆದಿಹರು
ಆಗುತಲಿಹ ಅಪಮಾನವ ಸಹಿಸುತ
ತಾಯಿ ಬಿಡುತಿಹಳು ಬಿಸಿಯುಸಿರು
ನಾಡ ಮಾತೆಯ ತುಂಬು ಹೃದಯಕೆ
ರೋಗ ರುಜಿನಗಳು ಮುತ್ತಿಹವು
ಅದನ್ನು ಕೀಳುವ ಹುನ್ನಾರದಲಿ
ಕತ್ತರಿ ಕೈಗಳು ಕಾದಿಹವು
ಕಂಡೂ ಕಾಣದೆ ಕುರುಡಾಗಿಹೆವು
ಇದ್ದೂ ಇಲ್ಲದ ನಾವುಗಳು
ಹೀಗೆಯೆ ಇದ್ದರೆ ನಾಳೆಯ ದಿನವೇ
ಸ್ವದೇಶಿಗಳೇ ಪರದೇಶಿಗಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಂದೆ
Next post ಭಾರತಾಂಬೆಯ ಮಹಿಮೆ

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…