ಇರುಳು-ಚಂದ್ರೋದಯ

ಬುವಿಯ ಚಾಪೆಯ ತೆರದಿ ಸುತ್ತಿ ಹೊತ್ತೊಯ್ವಂತೆ
ಕತ್ತಲೆಹಿರಣ್ಯಾಕ್ಷ ಮುತ್ತಿಬಹ ನಕ್ಷತ್ರ-
ಮೊತ್ತಮಂ ಧಿಕ್ಕರಿಸಿ ಬರುತಿಹನು ಗೆಲವಾಗಿ
ದಿವಕಶಾಂತಿಯ ತಂದು. ಹೊಸರಾಜ್ಯವಾಯ್ತಿಂದು
ಇದರ ಸತ್ಯವೆ ಬೇರೆ, ಶಾಸನವೆ ಬೇರೆ. ರವಿ
ತೋರಿದಾ ಜಗದ ಮಾಯೆ ತೀರಿತು. ಹೊಸ ಮಾಯೆ
ತೋರಿತೈ-ಆ ಮಾಯೆಯನೆ ಮಗುಚಿ ಈ ದೈತ್ಯ
ಹೊದೆದನೋ ತನ್ನ ದೊರೆತನವ ಮೆರಸಲೋಸುಗ!
ಹಗಲೊಳೆಡೆಗೆಟ್ಟಾಸೆ ಭಯಕೆಲ್ಲ ಎಡೆಯಿಲ್ಲಿ,
ಅಲ್ಲಿ ಗೆಲವಾದುದಿಲ್ಲಿ ಜಡ. ಅಲ್ಲಿನ ನನಸು
ಇಲ್ಲಿನ ಸ್ವಪ್ನ; ನಿರಂತವೀ ದೇವಾಸುರಂ,
ಜಗದಾಟ ಈ ಮಾಯೆ ಮಗುಚಿ ಹೊದೆವಾಟ-ಎನೆ
ಎಂತು ಮೈದೋರಿದಂ ಉಭಯರಿಗು ಶುಭವ ಕೋರಿ.
ಶಂಕರ ಸುಧಾಕರಂ ಮತ್ತೊಂದು ಮಾಯೆ ತೋರಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುಡಿಯಾ
Next post ತನ್ನ ತಾನು ಗೆದ್ದವನೇ

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…