ಲಘುವಾಗೆಲೆ ಮನ

ಲಘುವಾಗೆಲೆ ಮನ ಗೆಲವಾಗೆಲೆ ಮನ
ಹಾರು ನನ್ನ ಬಿಟ್ಟು
ಹಾರಿ ಹರಿಯ ಮುಟ್ಟು ||ಪ||

ನನಗಂಟಲು ನೀನಾಗುವೆ ಕಶ್ಮಲ
ನನ್ನ ತೊರೆಯೆ ನೀ ನಿರ್ಮಲ ನಿಷ್ಕಳ
ಹರಿಯೊ ನನ್ನ ಬಿಟ್ಟು
ಮುಂಬರಿದು ಹರಿಯ ಮುಟ್ಟು.

ನೀಲದಾಗಸದ ಹರಹೊಳು ಹಾರುತ
ಅಂಚೆಯಂತೆ ಮುಗಿಲಂಡನು ಸೇರುತ
ಕ್ಷೀರಾಬ್ಧಿಶಾಯಿ ಶ್ಯಾಮಸುಂದರನ
ಉಸಿರೊಳಾಡು ನೀನವನುಸಿರಾಗುತ

ಬೆಳಕಿಗೊಲಿದು ಬಿರಿದಲರಿನೆಲರು ಬರೆ
ಪೋಗು ಸಂಗಡಲೆ ನೀ ಮನವೆ
ಮುಗ್ಧರುಲಿವ ನಗೆಮಾತುಗಳಾಲಿಸಿ
ನಂದಗೋಕುಲವ ನೆನೆ ಮನವೆ.

ಗರಿ ಮುದುರಿಸುವಳಲಂಟನು ಕರಗಿಸೆ
ಶ್ಯಾಮನ ಮೈಬಣ್ಣದಿ ನೆನೆಯೊ
ಮಿಂದೇಳುತಲಾ ಪುಣ್ಯಕಾಳಿಮದಿ
ಚೆಲುಗಂಗಳ ತೇಜದಿ ಬೆರೆಯೋ.

ಲಘುವಾಗೆಲೆ ಮನ ಗೆಲವಾಗಲೆ ಮನ
ಹಾರು ನನ್ನ ಬಿಟ್ಟು
ಹಾರಿ ಹರಿಯ ಮುಟ್ಟು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನ್ವೇಷಣೆ
Next post ಒಲವೆ ನನ್ನ ಮೊಲವೆ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…