Home / ಲೇಖನ / ಇತರೆ / ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಿಯ ಸಖಿ,

ಜಿ.ಎಸ್. ಶಿವರುದ್ರಪ್ಪನವರ ಕವನದ ಕೆಲ ಸಾಲುಗಳು ನೆನಪಾಗುತ್ತಿದೆ.
ಪ್ರಶ್ನೆಯಿಲ್ಲದ ಬದುಕೊಂದು
ಬದುಕೆ ?
ನನಗಿಲ್ಲ ಪೂರ್ಣ ವಿರಾಮವನ್ನರಸಿ
ನಡೆಯುವ ಬಯಕೆ,
ಈ ಪ್ರಶ್ನೆಯ ಕೆಳಗೆ ಮಡಿಸಿರುವ
ಸಂಶಯದ ನೆರಳ
ಬಿಚ್ಚಿ ನಡೆಯುವುದು ನನಗಿಷ್ಟ

ಎಷ್ಟು ಸೊಗಸಾದ ಸಾಲುಗಳಲ್ಲವೇ ? ನಿಜಕ್ಕೂ ಪ್ರಶ್ನೆಯಿಲ್ಲದ ಬದುಕು ಬದುಕೆ? ಉತ್ತರಗಳಿಲ್ಲದೆಯೂ ಬದುಕಬಹುದು. ಆದರೆ ನಿರಂತರ ಪ್ರಶ್ನೆ ಮಾಡುವ ಮನಸ್ಸು ನಮ್ಮಲ್ಲಿರಬೇಕು. ಪ್ರಶ್ನೆಗಳಿಗೆ ಉತ್ತರ ಸಿಗಲಿ ಬಿಡಲಿ, ಉತ್ತರಗಳನ್ನು ಹುಡುಕುವ ಪ್ರಶ್ನೆಗಳನ್ನು ಕೆದಕುತ್ತಾ ಸಾಗುವ ದಿಟ್ಟತನ ನಮಗೆ ಬೇಕು.

ನಮ್ಮಲ್ಲಿ ಎಷ್ಟೊಂದು ಜನರಿಗೆ ಯಾವುದಕ್ಕೂ ಪುರಸೊತ್ತಿಲ್ಲ. ಆಂಗ್ಲ ಕವಿಯೊಬ್ಬ ಹೇಳುತ್ತಾನೆ, Take time to live. Because the world has so much to give…ಬದುಕಲು ಸಮಯ ಮಾಡಿಕೋ ಏಕೆಂದರೆ ನಿನಗಾಗಿ ನೀಡಲು ಈ ಜಗತ್ತಿಗೆ ಬಹಳಷ್ಟಿದೆ. ನಮ್ಮದೇ ಕಷ್ಟ, ದುಃಖ ಸಮಸ್ಯೆಗಳ ಜಾಲದಲ್ಲಿ ಸುತ್ತಿಕೊಂಡಿರುವ ನಮಗೆ,
ಹೃದಯ ತೆರೆದು ಹೀಗೆ ಬದುಕಲು, ಜಗತ್ತಿನ ಆಗು-ಹೋಗುಗಳಿಗೆ ಸ್ಪಂದಿಸಲು ಸಮಯವಿದೆಯೇ? ಅಥವಾ ಆಸಕ್ತಿಯಿದೆಯೇ?

ಒಬ್ಬ ವ್ಯಕ್ತಿ ನಿಜಕ್ಕೂ ಬದುಕಿದ್ದಾನೆಂದು ತಿಳಿಯುವುದೇ ಅವನಲ್ಲಿರುವ ಅದಮ್ಯ ಕುತೂಹಲದಿಂದ. ಎಲ್ಲವನ್ನೂ ಒಳಗೊಂಡ ಬದುಕನ್ನು ತಿಳಿಯಬೇಕೆಂದು ಪ್ರಶ್ನೆ ಮೇಲೆ ಪ್ರಶ್ನೆ ಹಾಕುವ ವ್ಯಕ್ತಿ, ಉತ್ತರಗಳನ್ನು ಅರಸುವ ವ್ಯಕ್ತಿ ಸದಾಕಾಲ ಜೀವಂತವಾಗಿರುತ್ತಾನೆ.
ಇಲ್ಲದಿದ್ದವನು ಬದುಕಿದ್ದೂ ಸತ್ತಂತೆ!

ಪ್ರಿಯ ಸಖಿ, ನಾವೂ ಬದುಕಲು ಒಂದಿಷ್ಟು ಸಮಯ ಮಾಡಿಕೊಳ್ಳೋಣ. ಜಗತ್ತು ನಮಗಾಗಿ ನೀಡಲು ಕಾದಿರುವ ಎಲ್ಲವನ್ನೂ ಆಸ್ವಾದಿಸೋಣ. ಪ್ರಶ್ನೆಗಳೂ ನಮ್ಮನ್ನು ಕಾಡಲಿ. ಉತ್ತರಗಳಿಗಾಗಿ ಹುಡುಕಾಡೋಣ. ಎಲ್ಲಕ್ಕೂ ಮೊದಲು ಹೃದಯ ತೆರೆದು ಬದುಕಲು ಪ್ರಯತ್ನಿಸೋಣ. ನೀನೇನನ್ನುತ್ತೀ ಸಖಿ? ಸಮಯ ಮೀರುತ್ತಿದೆ ಇನ್ನು ಬರಲೆ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್