Home / ಲೇಖನ / ಇತರೆ / ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಿಯ ಸಖಿ,

ಜಿ.ಎಸ್. ಶಿವರುದ್ರಪ್ಪನವರ ಕವನದ ಕೆಲ ಸಾಲುಗಳು ನೆನಪಾಗುತ್ತಿದೆ.
ಪ್ರಶ್ನೆಯಿಲ್ಲದ ಬದುಕೊಂದು
ಬದುಕೆ ?
ನನಗಿಲ್ಲ ಪೂರ್ಣ ವಿರಾಮವನ್ನರಸಿ
ನಡೆಯುವ ಬಯಕೆ,
ಈ ಪ್ರಶ್ನೆಯ ಕೆಳಗೆ ಮಡಿಸಿರುವ
ಸಂಶಯದ ನೆರಳ
ಬಿಚ್ಚಿ ನಡೆಯುವುದು ನನಗಿಷ್ಟ

ಎಷ್ಟು ಸೊಗಸಾದ ಸಾಲುಗಳಲ್ಲವೇ ? ನಿಜಕ್ಕೂ ಪ್ರಶ್ನೆಯಿಲ್ಲದ ಬದುಕು ಬದುಕೆ? ಉತ್ತರಗಳಿಲ್ಲದೆಯೂ ಬದುಕಬಹುದು. ಆದರೆ ನಿರಂತರ ಪ್ರಶ್ನೆ ಮಾಡುವ ಮನಸ್ಸು ನಮ್ಮಲ್ಲಿರಬೇಕು. ಪ್ರಶ್ನೆಗಳಿಗೆ ಉತ್ತರ ಸಿಗಲಿ ಬಿಡಲಿ, ಉತ್ತರಗಳನ್ನು ಹುಡುಕುವ ಪ್ರಶ್ನೆಗಳನ್ನು ಕೆದಕುತ್ತಾ ಸಾಗುವ ದಿಟ್ಟತನ ನಮಗೆ ಬೇಕು.

ನಮ್ಮಲ್ಲಿ ಎಷ್ಟೊಂದು ಜನರಿಗೆ ಯಾವುದಕ್ಕೂ ಪುರಸೊತ್ತಿಲ್ಲ. ಆಂಗ್ಲ ಕವಿಯೊಬ್ಬ ಹೇಳುತ್ತಾನೆ, Take time to live. Because the world has so much to give…ಬದುಕಲು ಸಮಯ ಮಾಡಿಕೋ ಏಕೆಂದರೆ ನಿನಗಾಗಿ ನೀಡಲು ಈ ಜಗತ್ತಿಗೆ ಬಹಳಷ್ಟಿದೆ. ನಮ್ಮದೇ ಕಷ್ಟ, ದುಃಖ ಸಮಸ್ಯೆಗಳ ಜಾಲದಲ್ಲಿ ಸುತ್ತಿಕೊಂಡಿರುವ ನಮಗೆ,
ಹೃದಯ ತೆರೆದು ಹೀಗೆ ಬದುಕಲು, ಜಗತ್ತಿನ ಆಗು-ಹೋಗುಗಳಿಗೆ ಸ್ಪಂದಿಸಲು ಸಮಯವಿದೆಯೇ? ಅಥವಾ ಆಸಕ್ತಿಯಿದೆಯೇ?

ಒಬ್ಬ ವ್ಯಕ್ತಿ ನಿಜಕ್ಕೂ ಬದುಕಿದ್ದಾನೆಂದು ತಿಳಿಯುವುದೇ ಅವನಲ್ಲಿರುವ ಅದಮ್ಯ ಕುತೂಹಲದಿಂದ. ಎಲ್ಲವನ್ನೂ ಒಳಗೊಂಡ ಬದುಕನ್ನು ತಿಳಿಯಬೇಕೆಂದು ಪ್ರಶ್ನೆ ಮೇಲೆ ಪ್ರಶ್ನೆ ಹಾಕುವ ವ್ಯಕ್ತಿ, ಉತ್ತರಗಳನ್ನು ಅರಸುವ ವ್ಯಕ್ತಿ ಸದಾಕಾಲ ಜೀವಂತವಾಗಿರುತ್ತಾನೆ.
ಇಲ್ಲದಿದ್ದವನು ಬದುಕಿದ್ದೂ ಸತ್ತಂತೆ!

ಪ್ರಿಯ ಸಖಿ, ನಾವೂ ಬದುಕಲು ಒಂದಿಷ್ಟು ಸಮಯ ಮಾಡಿಕೊಳ್ಳೋಣ. ಜಗತ್ತು ನಮಗಾಗಿ ನೀಡಲು ಕಾದಿರುವ ಎಲ್ಲವನ್ನೂ ಆಸ್ವಾದಿಸೋಣ. ಪ್ರಶ್ನೆಗಳೂ ನಮ್ಮನ್ನು ಕಾಡಲಿ. ಉತ್ತರಗಳಿಗಾಗಿ ಹುಡುಕಾಡೋಣ. ಎಲ್ಲಕ್ಕೂ ಮೊದಲು ಹೃದಯ ತೆರೆದು ಬದುಕಲು ಪ್ರಯತ್ನಿಸೋಣ. ನೀನೇನನ್ನುತ್ತೀ ಸಖಿ? ಸಮಯ ಮೀರುತ್ತಿದೆ ಇನ್ನು ಬರಲೆ?
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...