Home / ಲೇಖನ / ಇತರೆ / ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಶ್ನೆಯಿಲ್ಲದ ಬದುಕೊಂದು ಬದುಕೆ

ಪ್ರಿಯ ಸಖಿ,

ಜಿ.ಎಸ್. ಶಿವರುದ್ರಪ್ಪನವರ ಕವನದ ಕೆಲ ಸಾಲುಗಳು ನೆನಪಾಗುತ್ತಿದೆ.
ಪ್ರಶ್ನೆಯಿಲ್ಲದ ಬದುಕೊಂದು
ಬದುಕೆ ?
ನನಗಿಲ್ಲ ಪೂರ್ಣ ವಿರಾಮವನ್ನರಸಿ
ನಡೆಯುವ ಬಯಕೆ,
ಈ ಪ್ರಶ್ನೆಯ ಕೆಳಗೆ ಮಡಿಸಿರುವ
ಸಂಶಯದ ನೆರಳ
ಬಿಚ್ಚಿ ನಡೆಯುವುದು ನನಗಿಷ್ಟ

ಎಷ್ಟು ಸೊಗಸಾದ ಸಾಲುಗಳಲ್ಲವೇ ? ನಿಜಕ್ಕೂ ಪ್ರಶ್ನೆಯಿಲ್ಲದ ಬದುಕು ಬದುಕೆ? ಉತ್ತರಗಳಿಲ್ಲದೆಯೂ ಬದುಕಬಹುದು. ಆದರೆ ನಿರಂತರ ಪ್ರಶ್ನೆ ಮಾಡುವ ಮನಸ್ಸು ನಮ್ಮಲ್ಲಿರಬೇಕು. ಪ್ರಶ್ನೆಗಳಿಗೆ ಉತ್ತರ ಸಿಗಲಿ ಬಿಡಲಿ, ಉತ್ತರಗಳನ್ನು ಹುಡುಕುವ ಪ್ರಶ್ನೆಗಳನ್ನು ಕೆದಕುತ್ತಾ ಸಾಗುವ ದಿಟ್ಟತನ ನಮಗೆ ಬೇಕು.

ನಮ್ಮಲ್ಲಿ ಎಷ್ಟೊಂದು ಜನರಿಗೆ ಯಾವುದಕ್ಕೂ ಪುರಸೊತ್ತಿಲ್ಲ. ಆಂಗ್ಲ ಕವಿಯೊಬ್ಬ ಹೇಳುತ್ತಾನೆ, Take time to live. Because the world has so much to give…ಬದುಕಲು ಸಮಯ ಮಾಡಿಕೋ ಏಕೆಂದರೆ ನಿನಗಾಗಿ ನೀಡಲು ಈ ಜಗತ್ತಿಗೆ ಬಹಳಷ್ಟಿದೆ. ನಮ್ಮದೇ ಕಷ್ಟ, ದುಃಖ ಸಮಸ್ಯೆಗಳ ಜಾಲದಲ್ಲಿ ಸುತ್ತಿಕೊಂಡಿರುವ ನಮಗೆ,
ಹೃದಯ ತೆರೆದು ಹೀಗೆ ಬದುಕಲು, ಜಗತ್ತಿನ ಆಗು-ಹೋಗುಗಳಿಗೆ ಸ್ಪಂದಿಸಲು ಸಮಯವಿದೆಯೇ? ಅಥವಾ ಆಸಕ್ತಿಯಿದೆಯೇ?

ಒಬ್ಬ ವ್ಯಕ್ತಿ ನಿಜಕ್ಕೂ ಬದುಕಿದ್ದಾನೆಂದು ತಿಳಿಯುವುದೇ ಅವನಲ್ಲಿರುವ ಅದಮ್ಯ ಕುತೂಹಲದಿಂದ. ಎಲ್ಲವನ್ನೂ ಒಳಗೊಂಡ ಬದುಕನ್ನು ತಿಳಿಯಬೇಕೆಂದು ಪ್ರಶ್ನೆ ಮೇಲೆ ಪ್ರಶ್ನೆ ಹಾಕುವ ವ್ಯಕ್ತಿ, ಉತ್ತರಗಳನ್ನು ಅರಸುವ ವ್ಯಕ್ತಿ ಸದಾಕಾಲ ಜೀವಂತವಾಗಿರುತ್ತಾನೆ.
ಇಲ್ಲದಿದ್ದವನು ಬದುಕಿದ್ದೂ ಸತ್ತಂತೆ!

ಪ್ರಿಯ ಸಖಿ, ನಾವೂ ಬದುಕಲು ಒಂದಿಷ್ಟು ಸಮಯ ಮಾಡಿಕೊಳ್ಳೋಣ. ಜಗತ್ತು ನಮಗಾಗಿ ನೀಡಲು ಕಾದಿರುವ ಎಲ್ಲವನ್ನೂ ಆಸ್ವಾದಿಸೋಣ. ಪ್ರಶ್ನೆಗಳೂ ನಮ್ಮನ್ನು ಕಾಡಲಿ. ಉತ್ತರಗಳಿಗಾಗಿ ಹುಡುಕಾಡೋಣ. ಎಲ್ಲಕ್ಕೂ ಮೊದಲು ಹೃದಯ ತೆರೆದು ಬದುಕಲು ಪ್ರಯತ್ನಿಸೋಣ. ನೀನೇನನ್ನುತ್ತೀ ಸಖಿ? ಸಮಯ ಮೀರುತ್ತಿದೆ ಇನ್ನು ಬರಲೆ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...