ನಿರೀಶ್ವರನನ್ನು ಕುರಿತು

ಭವದುರ್ಗವಿಪಿನದೊಳು ಗಮ್ಯವರಿಯದೆ ತೊಳಲಿ
ಶ್ರಾಂತಿಯಿಂ ಭ್ರಾಂತಿಯಿಂ ಗತಿಗೆಟ್ಟು ಮತಿಗೆಟ್ಟು
ಮುಂತನರಿಯದೆ ನಿರಿಹಪರನಾಗಿ, ಅಂದಾರ್ತ
ಪ್ಲವಗವಾಹಿನಿ ವಿಂಧ್ಯಕಾನನದಿ ಬಳಿಗೆಟ್ಟು
ನಿರೀಹಮಾಗಿ ಋಕ್ಷ ಬಿಲಮುಖದಿ ನಿಂದವೊಲು,
ಧರ್ಮಗಹ್ವರ ಮುಖದಿ ಶಂಕಿಸುತ ನಿಂದಿರುವ
ಕರ್ಮ ಸಂದೇಹಿ, ಸಂಮೋಹಿತಾಂತಃಕರಣ,
ನಿರೀಶ್ವರನೆ, ಗವಿಯ ತಮಕಂಜಿ ಹಿಂಜರಿದು
ನಿಲಬೇಡ; ನೋಡೈ: ರಸಕ್ಲಿನ್ನ ಹಂಸಸಂ-
ಸೇವಿತಂ, ಸುಮನಆಮೋದ ನಿಷ್ಯಂದಿ, ಮೇ-
ಣಾನಿಷ್ಟಹೃಷ್ಟ ನಭಸಂಗಮಾರಾವಮೀ
ಬಿಲಮುಖಂ; ಇದರಂತರಾಳದೊಳಗಿರುವುದೈ
ನಿನ್ನ ತೃಷ್ಣೆಗಳೆಲ್ಲ ತಣಿವ ಜೀವನದ ನಚ್ಚು:
ನೆಚ್ಚಿ ಹೊಗು, ಕಾವಲಿಹ ಕಾವಳಕೆ ಕಣ್ಣ ಮುಚ್ಚು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಂಡಿದ್ದೇನೆ ನಾನು
Next post ಎಷ್ಟೊಂದು ಗಾಳಿ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…