ಕವಿ ಬೇಂದ್ರೆಯವರನ್ನು ಕುರಿತು

ಕವೀಶ್ವರ, ಸುಹೃದ್ವರ, ನಿನ್ನ ಸಿರಿಗನ್ನಡದ
ಮಾತಿನೊಳು ಮೂಡುತಿಹ ಭವ್ಯ ಸುಂದರ ಕಾವ್ಯ-
ಕೋತು, ನುಡಿಯ ಬೆಡಗು ಹಾಡಿನ ಗುಂಗು ಊಹೆಯ
ನವೋನವ್ಯತೆ ಭಾವನೆಯ ಉದಾರತೆ-ಇವಕೆ
ಮನಸೋತು ರಸಾರ್ದ್ರಸ್ವಾಂತದಿಂ ಭಾವಿಪೆನು:
ಆವ ಬೀಳಾಸೆಯಿಂದಾದಾವ ಶಾಪಕ್ಕೊ
ಆವ ದುಷ್ಕೃತಿಯ ನಿಷ್ಕೃತಿಗೊ, ನಮ್ಮ ತಾಯ್ನುಡಿ
ತನಗಾದ ನಾಡಿನೊಳೆ ತಾನಮಂಗಳೆಯೆನಿಸಿ
ಹಿರಿಮೆಯ ನೀಗಿ ಹೆಸರನಳಿದು ರೂವಿಲಿಯಾಗಿ
ಬನ್ನ ಪಡುತಿರಲು, ತಪೋವಿಪಾಕಮೊದವಿತೆನೆ,
ತನ್ನತೆಯ ಜತೆಗೆ ದಿವ್ಯತೆಯನಳವಡಿಸಿ
ತಿರೆಗೆ ಸೋಜಿಗಮೀಕೆ ಎಂದು ಜನ ಬೆರಗಾಗೆ
ರೂಪವನಿತ್ತ ರಾಮನಾದೆಯೈ ದತ್ತರಾಮ,
ಗಾಳಿಗೂ ಬಾಳೀವ ರೂವಾರಿ, ಸಿದ್ಧ ಕಾಮ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರೂಣಗಳು
Next post ಬಾಗಿಲು ಬಡೀತಾರೆ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…