Home / ಕವನ / ಕವಿತೆ / ಅವನು-ಅವಳು

ಅವನು-ಅವಳು

ಕಲನಾದಿನಿ ಕಾವೇರಿಯ ತೀರದಿ
ತನ್ನನೆ ನೆನೆಯುತಲವನಿದ್ದ;
ತನ್ನ ಬಿಜ್ಜೆ ಕುಲ ಶೀಲ ಸಂಪತ್ತು
ತನ್ನ ರೂಪು ತನ್ನೊಳೆ ಇದ್ದ.

ತನ್ನವರೊಲ್ಲದ ಸರಸತಿ ನವವಧು
ಗಂಡನ ಮಡಿವಾಳಿತಿಯಾಗಿ
ಹಿಂಡುಬಟ್ಟೆಗಳ ಹಿಂಡಲು ಬಂದಳು
ಜವ್ವನದುಲ್ಲಸದೊಳು ತೂಗಿ.

ಕರೆಯೊಳಗಿಬ್ಬರೆ-ಆರೋ ಎನ್ನುತ
ಸೆರಗೆದೆಗೆಳೆವಳು ನಾಚುತಲಿ,
ಬಳಿಕಿವನೇ-ಸರಿ-ಭಯವೇನೆನ್ನುತ
ಹೊಳೆಗಿಳಿವಳು ನಿರ್ಲಕ್ಷ್ಯದಲಿ.

ಬಿಂಕದವನೀತ, ಬಿಂಕದವಳಾಕೆ,
ಮೌನ ನೆರವು ಮನ ಮಾತಾಡೆ;
ಕಣ್ ಕಣ್ ಕೂಟವೆ ಸಾಕಾಯ್ತವರಿಗೆ
ಬೇಟದ ಬಿರುನುಡಿ ಸಿಡಿದಾಡೆ.

“ಆಹಾ ನೀ ಸುಂದರಿ, ದಿಟ, ಆದೊಡೆ
ಮರುಕವ ತರುವುದು ಈ ಚೆಲುವು;
ಇದರಿಂಬಿಗೆ ನಿರ್ಭಾಗ್ಯರ ಮನೆಯೇ?
ಎನ್ನುತ ಸುಯ್ಯುವುದೆನ್ನೊಲವು.”

ಎನಲಾಕೆಯು ತಾತ್ಸಾರದಿ ನುಡಿವಳು:
“ನಿನ್ನ ಮರುಕವಾರಿಗೆ ಬೇಕು!
ಸುಮ್ಮನಿರೈ ನನ್ನಿದಿರೇ ಈ ಹಿಡಿ-
ಹೊನ್ನಳತೆಯ ನೇಹದ ಕಾಕು”

ಎನೆ ಅವನಿಂತೆಂದನು ನಸು ನಾಚುತ:
“ತಪ್ಪು ತಪ್ಪು ನಮ್ಮಪ್ಪನದೊಪ್ಪಿದೆ;
ಹಣಕೂ ಮಿಗಿಲಾಯ್ತಭಿಮಾನ
ಕೇಳಿದ ತಪ್ಪಿಗೆ ಕೊಡೆನೆನ್ನುವ ತ-
ಪ್ಪೀ ಹೋರಾಟದಿ ಸೊಗವೂನ.”

ಸರಸತಿ ಮೌನದೊಳೇ ಮರನುಡಿದಳು:
“ತಪ್ಪೋ ಒಪ್ಪೋ ಸೊಗವೋ ಸುಯ್ಯಲೊ
ನಿನ್ನದು ನಿನಗೆನ್ನದು ನನಗೆ-
ನಿನ್ನವರ ಬಿಂಕಕೆನ್ನೊಲವೆ ಸುಂಕ?
ಪೋ, ಇನ್ನಾ ಮಾತೇಕೆಮಗೆ!

ನಿನ್ನ ರೂಪ ಸಿರಿ ಬಿಚ್ಚೆ ಬಿಗುಮಾನ
ನಿನಗೆಯೆ ಇರಲೇ ಪಿತೃಭಕ್ತಿ-
ಇದೆ ಸಾಕಿದೆಸಾಕಿದೆಸಾಕೆನಗೀ
ಬಡವರ ನೆರವಿನೊಳೇ ಮುಕ್ತಿ.”

ಬಿರುಸಿನೊಳೊಗೆಯುವ ಬಟ್ಟೆಯ ಸದ್ದಿನೊ-
ಳೀ ತೆರ ಬಿರುನುಡಿಗಳ ನುಡಿದು
ಕಜ್ಜ ತೀರೆ ಮೇಲೆದ್ದು ನಡೆದಳು
ರೂಪಶೀಲದಿಂದೆದೆ ಕಡೆದು.

ಹುಸಿಮರುಕದ ಹೊಗೆಯಾರುತಲಾಸೆಯ
ಕಿಡಿಯುರಿದೊಲುಮೆಯ ಬೆಳಕಾಗಿ
ಬಿಂಕವ ಸುಟ್ಟು ನಿರಾಸೆಯ ತೋರಲು
ಎಂತು ಸುಯ್ದನವ ನಿಡಿದಾಗಿ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...