Home / ಕವನ / ಕವಿತೆ / ಅವನು-ಅವಳು

ಅವನು-ಅವಳು

ಕಲನಾದಿನಿ ಕಾವೇರಿಯ ತೀರದಿ
ತನ್ನನೆ ನೆನೆಯುತಲವನಿದ್ದ;
ತನ್ನ ಬಿಜ್ಜೆ ಕುಲ ಶೀಲ ಸಂಪತ್ತು
ತನ್ನ ರೂಪು ತನ್ನೊಳೆ ಇದ್ದ.

ತನ್ನವರೊಲ್ಲದ ಸರಸತಿ ನವವಧು
ಗಂಡನ ಮಡಿವಾಳಿತಿಯಾಗಿ
ಹಿಂಡುಬಟ್ಟೆಗಳ ಹಿಂಡಲು ಬಂದಳು
ಜವ್ವನದುಲ್ಲಸದೊಳು ತೂಗಿ.

ಕರೆಯೊಳಗಿಬ್ಬರೆ-ಆರೋ ಎನ್ನುತ
ಸೆರಗೆದೆಗೆಳೆವಳು ನಾಚುತಲಿ,
ಬಳಿಕಿವನೇ-ಸರಿ-ಭಯವೇನೆನ್ನುತ
ಹೊಳೆಗಿಳಿವಳು ನಿರ್ಲಕ್ಷ್ಯದಲಿ.

ಬಿಂಕದವನೀತ, ಬಿಂಕದವಳಾಕೆ,
ಮೌನ ನೆರವು ಮನ ಮಾತಾಡೆ;
ಕಣ್ ಕಣ್ ಕೂಟವೆ ಸಾಕಾಯ್ತವರಿಗೆ
ಬೇಟದ ಬಿರುನುಡಿ ಸಿಡಿದಾಡೆ.

“ಆಹಾ ನೀ ಸುಂದರಿ, ದಿಟ, ಆದೊಡೆ
ಮರುಕವ ತರುವುದು ಈ ಚೆಲುವು;
ಇದರಿಂಬಿಗೆ ನಿರ್ಭಾಗ್ಯರ ಮನೆಯೇ?
ಎನ್ನುತ ಸುಯ್ಯುವುದೆನ್ನೊಲವು.”

ಎನಲಾಕೆಯು ತಾತ್ಸಾರದಿ ನುಡಿವಳು:
“ನಿನ್ನ ಮರುಕವಾರಿಗೆ ಬೇಕು!
ಸುಮ್ಮನಿರೈ ನನ್ನಿದಿರೇ ಈ ಹಿಡಿ-
ಹೊನ್ನಳತೆಯ ನೇಹದ ಕಾಕು”

ಎನೆ ಅವನಿಂತೆಂದನು ನಸು ನಾಚುತ:
“ತಪ್ಪು ತಪ್ಪು ನಮ್ಮಪ್ಪನದೊಪ್ಪಿದೆ;
ಹಣಕೂ ಮಿಗಿಲಾಯ್ತಭಿಮಾನ
ಕೇಳಿದ ತಪ್ಪಿಗೆ ಕೊಡೆನೆನ್ನುವ ತ-
ಪ್ಪೀ ಹೋರಾಟದಿ ಸೊಗವೂನ.”

ಸರಸತಿ ಮೌನದೊಳೇ ಮರನುಡಿದಳು:
“ತಪ್ಪೋ ಒಪ್ಪೋ ಸೊಗವೋ ಸುಯ್ಯಲೊ
ನಿನ್ನದು ನಿನಗೆನ್ನದು ನನಗೆ-
ನಿನ್ನವರ ಬಿಂಕಕೆನ್ನೊಲವೆ ಸುಂಕ?
ಪೋ, ಇನ್ನಾ ಮಾತೇಕೆಮಗೆ!

ನಿನ್ನ ರೂಪ ಸಿರಿ ಬಿಚ್ಚೆ ಬಿಗುಮಾನ
ನಿನಗೆಯೆ ಇರಲೇ ಪಿತೃಭಕ್ತಿ-
ಇದೆ ಸಾಕಿದೆಸಾಕಿದೆಸಾಕೆನಗೀ
ಬಡವರ ನೆರವಿನೊಳೇ ಮುಕ್ತಿ.”

ಬಿರುಸಿನೊಳೊಗೆಯುವ ಬಟ್ಟೆಯ ಸದ್ದಿನೊ-
ಳೀ ತೆರ ಬಿರುನುಡಿಗಳ ನುಡಿದು
ಕಜ್ಜ ತೀರೆ ಮೇಲೆದ್ದು ನಡೆದಳು
ರೂಪಶೀಲದಿಂದೆದೆ ಕಡೆದು.

ಹುಸಿಮರುಕದ ಹೊಗೆಯಾರುತಲಾಸೆಯ
ಕಿಡಿಯುರಿದೊಲುಮೆಯ ಬೆಳಕಾಗಿ
ಬಿಂಕವ ಸುಟ್ಟು ನಿರಾಸೆಯ ತೋರಲು
ಎಂತು ಸುಯ್ದನವ ನಿಡಿದಾಗಿ!
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...