Home / ಕವನ / ಕವಿತೆ / ಅವನು-ಅವಳು

ಅವನು-ಅವಳು

ಕಲನಾದಿನಿ ಕಾವೇರಿಯ ತೀರದಿ
ತನ್ನನೆ ನೆನೆಯುತಲವನಿದ್ದ;
ತನ್ನ ಬಿಜ್ಜೆ ಕುಲ ಶೀಲ ಸಂಪತ್ತು
ತನ್ನ ರೂಪು ತನ್ನೊಳೆ ಇದ್ದ.

ತನ್ನವರೊಲ್ಲದ ಸರಸತಿ ನವವಧು
ಗಂಡನ ಮಡಿವಾಳಿತಿಯಾಗಿ
ಹಿಂಡುಬಟ್ಟೆಗಳ ಹಿಂಡಲು ಬಂದಳು
ಜವ್ವನದುಲ್ಲಸದೊಳು ತೂಗಿ.

ಕರೆಯೊಳಗಿಬ್ಬರೆ-ಆರೋ ಎನ್ನುತ
ಸೆರಗೆದೆಗೆಳೆವಳು ನಾಚುತಲಿ,
ಬಳಿಕಿವನೇ-ಸರಿ-ಭಯವೇನೆನ್ನುತ
ಹೊಳೆಗಿಳಿವಳು ನಿರ್ಲಕ್ಷ್ಯದಲಿ.

ಬಿಂಕದವನೀತ, ಬಿಂಕದವಳಾಕೆ,
ಮೌನ ನೆರವು ಮನ ಮಾತಾಡೆ;
ಕಣ್ ಕಣ್ ಕೂಟವೆ ಸಾಕಾಯ್ತವರಿಗೆ
ಬೇಟದ ಬಿರುನುಡಿ ಸಿಡಿದಾಡೆ.

“ಆಹಾ ನೀ ಸುಂದರಿ, ದಿಟ, ಆದೊಡೆ
ಮರುಕವ ತರುವುದು ಈ ಚೆಲುವು;
ಇದರಿಂಬಿಗೆ ನಿರ್ಭಾಗ್ಯರ ಮನೆಯೇ?
ಎನ್ನುತ ಸುಯ್ಯುವುದೆನ್ನೊಲವು.”

ಎನಲಾಕೆಯು ತಾತ್ಸಾರದಿ ನುಡಿವಳು:
“ನಿನ್ನ ಮರುಕವಾರಿಗೆ ಬೇಕು!
ಸುಮ್ಮನಿರೈ ನನ್ನಿದಿರೇ ಈ ಹಿಡಿ-
ಹೊನ್ನಳತೆಯ ನೇಹದ ಕಾಕು”

ಎನೆ ಅವನಿಂತೆಂದನು ನಸು ನಾಚುತ:
“ತಪ್ಪು ತಪ್ಪು ನಮ್ಮಪ್ಪನದೊಪ್ಪಿದೆ;
ಹಣಕೂ ಮಿಗಿಲಾಯ್ತಭಿಮಾನ
ಕೇಳಿದ ತಪ್ಪಿಗೆ ಕೊಡೆನೆನ್ನುವ ತ-
ಪ್ಪೀ ಹೋರಾಟದಿ ಸೊಗವೂನ.”

ಸರಸತಿ ಮೌನದೊಳೇ ಮರನುಡಿದಳು:
“ತಪ್ಪೋ ಒಪ್ಪೋ ಸೊಗವೋ ಸುಯ್ಯಲೊ
ನಿನ್ನದು ನಿನಗೆನ್ನದು ನನಗೆ-
ನಿನ್ನವರ ಬಿಂಕಕೆನ್ನೊಲವೆ ಸುಂಕ?
ಪೋ, ಇನ್ನಾ ಮಾತೇಕೆಮಗೆ!

ನಿನ್ನ ರೂಪ ಸಿರಿ ಬಿಚ್ಚೆ ಬಿಗುಮಾನ
ನಿನಗೆಯೆ ಇರಲೇ ಪಿತೃಭಕ್ತಿ-
ಇದೆ ಸಾಕಿದೆಸಾಕಿದೆಸಾಕೆನಗೀ
ಬಡವರ ನೆರವಿನೊಳೇ ಮುಕ್ತಿ.”

ಬಿರುಸಿನೊಳೊಗೆಯುವ ಬಟ್ಟೆಯ ಸದ್ದಿನೊ-
ಳೀ ತೆರ ಬಿರುನುಡಿಗಳ ನುಡಿದು
ಕಜ್ಜ ತೀರೆ ಮೇಲೆದ್ದು ನಡೆದಳು
ರೂಪಶೀಲದಿಂದೆದೆ ಕಡೆದು.

ಹುಸಿಮರುಕದ ಹೊಗೆಯಾರುತಲಾಸೆಯ
ಕಿಡಿಯುರಿದೊಲುಮೆಯ ಬೆಳಕಾಗಿ
ಬಿಂಕವ ಸುಟ್ಟು ನಿರಾಸೆಯ ತೋರಲು
ಎಂತು ಸುಯ್ದನವ ನಿಡಿದಾಗಿ!
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...