Home / ಲೇಖನ / ಇತರೆ / ಸಾವು

ಸಾವು

ಪ್ರಿಯ ಸಖಿ,
ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ
(ಸಾನೆಟ್)

ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು
ನೋವಿನೋಲುಗ ಜೀವದಾಧಿಕ್ಯಗೋಳು

ಎನ್ನುತ್ತಾರೆ. ತುಂಬು ಬಾಳನು ಬಾಳಿ ಸಾವಿಗೀಡಾದ ವ್ಯಕ್ತಿಯ ಬಗೆಗೆ ನಮಗಾಗುವ ದುಃಖದ ನೂರರಷ್ಟು ಪಾಲು ದುಃಖ ಕೊಲೆಯಾದ, ವೀರಮರಣದ ಹೆಸರಲ್ಲಿ ಸತ್ತ, ಆತ್ಮಹತ್ಯೆಗೊಳಗಾದ, ಅಪಘಾತದಿಂದ ಸತ್ತ ವ್ಯಕ್ತಿಯ ಇಂತಹ ಅಸಹಜ ಸಾವಿಗಾಗಿ ಆಗುತ್ತದೆ. ಇಂತಹ ಸಾವಿಗಾಗಿ ಮರುಗುತ್ತಾ ಕವಿ,

ಯಾರ ಹಸಿವಿಂಗಿಸಲು, ಯಾರ ಮದ ಭಂಗಿಸಲು
ಕೂರಲಗ ಕತ್ತಿಯಲಿ ನೆತ್ತರಿನ ಭುಗಿಲು?

ಎಂದು ಪ್ರಶ್ನಿಸುತ್ತಾರೆ. ಇಂತಹ ಅಸಹಜ ಸಾವುಗಳಿಗೆ ಕಾರಣವಾದರೂ ಏನು? ಎನ್ನುತ್ತಾ,

ಕಾವ ಕರುಣೆಯ ನಯದ ತೋಳ ತೊಂಗಲಿನಲ್ಲಿ
ಜೀವ ದುಂಬಿಯ ಆಟ

ಎಂದು ವಿಷಾದಿಸುತ್ತಾರೆ. ಕಾಯುವ ಕರುಣೆಯನ್ನು ನಂಬಿ ನೆಮ್ಮದಿಯಾಗಿರುವಾಗ ಕೊಲ್ಲುವಾಟವ ಆಡುವ ಈ ಆಳ್ವಿಕೆಗೆ ಉತ್ತರವೆಲ್ಲಿದೆ ? ಎನ್ನುತ್ತಾ, ಪದ್ಯದ ಕೊನೆಯಲ್ಲಿ

ಕೊಲೆಯು ಜೀವದ ಕೊನೆಯೆ! ಬಾಳು ಸಾವಿನ ಆಳೆ!
ಜಗದ ಸೌಂದರ್ಯದಂತಕನ ಸೂಳೆ!

ಎಂದು ಮಾರ್ಮಿಕವಾಗಿ ನುಡಿಯುತ್ತಾರೆ. ವಿಶೇಷ ಮಾನವ ಜನ್ಮ ಪಡೆದು ತನ್ನ ಜೀವನದ ಅಲ್ಪ ಭಾಗವನ್ನು, ಅನುಭವಿಸಿರದಾಗ ಕೊಲೆಯೇ ಜೀವದ ಕೊನೆಯಾಗಬೇಕೆ? ಈ ಬಾಳೆಂಬುದು ಸಾವು ಹೇಳಿದಂತೆ ಕೇಳುವ ಆಳಾಗಬೇಕೆ? ಎನ್ನುತ್ತಾ ಜಗತ್ತಿನ ಸೌಂದರ್ಯವೆನ್ನುವುದು ಅಂತಕ ಬೇಕೆನ್ನುವಂತೆ ಕುಣಿಸುವ,
ಕೊನೆಗಾಣಿಸುವ ಸೂಳೆಯೆ? ಎಂದು ಪ್ರಶ್ನಿಸುತ್ತಾರೆ. ಹೌದು ಅಸಹಜ ಸಾವನ್ನು ತಡೆಯಲು ಇಲ್ಲಿ ಯಾರಿಗೂ ಸಾಧ್ಯವಿಲ್ಲ. ಇಂತಹ ಅಸಹಜ ಸಾವಿಗೆ ಆ ಅಂತಕ
ಉತ್ತರ ಕೊಡಬಲ್ಲನೇ ಸಖಿ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್