Home / ಲೇಖನ / ಇತರೆ / ಸಾವು

ಸಾವು

ಪ್ರಿಯ ಸಖಿ,
ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ
(ಸಾನೆಟ್)

ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು
ನೋವಿನೋಲುಗ ಜೀವದಾಧಿಕ್ಯಗೋಳು

ಎನ್ನುತ್ತಾರೆ. ತುಂಬು ಬಾಳನು ಬಾಳಿ ಸಾವಿಗೀಡಾದ ವ್ಯಕ್ತಿಯ ಬಗೆಗೆ ನಮಗಾಗುವ ದುಃಖದ ನೂರರಷ್ಟು ಪಾಲು ದುಃಖ ಕೊಲೆಯಾದ, ವೀರಮರಣದ ಹೆಸರಲ್ಲಿ ಸತ್ತ, ಆತ್ಮಹತ್ಯೆಗೊಳಗಾದ, ಅಪಘಾತದಿಂದ ಸತ್ತ ವ್ಯಕ್ತಿಯ ಇಂತಹ ಅಸಹಜ ಸಾವಿಗಾಗಿ ಆಗುತ್ತದೆ. ಇಂತಹ ಸಾವಿಗಾಗಿ ಮರುಗುತ್ತಾ ಕವಿ,

ಯಾರ ಹಸಿವಿಂಗಿಸಲು, ಯಾರ ಮದ ಭಂಗಿಸಲು
ಕೂರಲಗ ಕತ್ತಿಯಲಿ ನೆತ್ತರಿನ ಭುಗಿಲು?

ಎಂದು ಪ್ರಶ್ನಿಸುತ್ತಾರೆ. ಇಂತಹ ಅಸಹಜ ಸಾವುಗಳಿಗೆ ಕಾರಣವಾದರೂ ಏನು? ಎನ್ನುತ್ತಾ,

ಕಾವ ಕರುಣೆಯ ನಯದ ತೋಳ ತೊಂಗಲಿನಲ್ಲಿ
ಜೀವ ದುಂಬಿಯ ಆಟ

ಎಂದು ವಿಷಾದಿಸುತ್ತಾರೆ. ಕಾಯುವ ಕರುಣೆಯನ್ನು ನಂಬಿ ನೆಮ್ಮದಿಯಾಗಿರುವಾಗ ಕೊಲ್ಲುವಾಟವ ಆಡುವ ಈ ಆಳ್ವಿಕೆಗೆ ಉತ್ತರವೆಲ್ಲಿದೆ ? ಎನ್ನುತ್ತಾ, ಪದ್ಯದ ಕೊನೆಯಲ್ಲಿ

ಕೊಲೆಯು ಜೀವದ ಕೊನೆಯೆ! ಬಾಳು ಸಾವಿನ ಆಳೆ!
ಜಗದ ಸೌಂದರ್ಯದಂತಕನ ಸೂಳೆ!

ಎಂದು ಮಾರ್ಮಿಕವಾಗಿ ನುಡಿಯುತ್ತಾರೆ. ವಿಶೇಷ ಮಾನವ ಜನ್ಮ ಪಡೆದು ತನ್ನ ಜೀವನದ ಅಲ್ಪ ಭಾಗವನ್ನು, ಅನುಭವಿಸಿರದಾಗ ಕೊಲೆಯೇ ಜೀವದ ಕೊನೆಯಾಗಬೇಕೆ? ಈ ಬಾಳೆಂಬುದು ಸಾವು ಹೇಳಿದಂತೆ ಕೇಳುವ ಆಳಾಗಬೇಕೆ? ಎನ್ನುತ್ತಾ ಜಗತ್ತಿನ ಸೌಂದರ್ಯವೆನ್ನುವುದು ಅಂತಕ ಬೇಕೆನ್ನುವಂತೆ ಕುಣಿಸುವ,
ಕೊನೆಗಾಣಿಸುವ ಸೂಳೆಯೆ? ಎಂದು ಪ್ರಶ್ನಿಸುತ್ತಾರೆ. ಹೌದು ಅಸಹಜ ಸಾವನ್ನು ತಡೆಯಲು ಇಲ್ಲಿ ಯಾರಿಗೂ ಸಾಧ್ಯವಿಲ್ಲ. ಇಂತಹ ಅಸಹಜ ಸಾವಿಗೆ ಆ ಅಂತಕ
ಉತ್ತರ ಕೊಡಬಲ್ಲನೇ ಸಖಿ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...